ಚಿತ್ರದುರ್ಗ: ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಹಾಗೂ ಹಾಸ್ಟೆಲ್ ಮಹಿಳಾ ವಾರ್ಡನ್ ನ್ಯಾಯಾಂಗ ಬಂಧನದ ಅವಧಿ ಅ.10ರವರೆಗೆ ವಿಸ್ತರಣೆಗೊಂಡಿದೆ.
ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರಿಂದ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಆರೋಪಿಗಳನ್ನು ಮಂಗಳವಾರ ಹಾಜರುಪಡಿಸಲಾಯಿತು. ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶೆ ಬಿ.ಕೆ.ಕೋಮಲಾ ಆದೇಶಿಸಿದರು.
ಇಬ್ಬರು ಆರೋಪಿಗಳನ್ನು ಸೆ.1ರಂದು ಬಂಧಿಸಲಾಗಿದೆ. ಶಿವಮೂರ್ತಿ ಮುರುಘಾ ಶರಣರನ್ನು ಜಿಲ್ಲಾ ಕಾರಾಗೃಹದಲ್ಲಿ ಹಾಗೂ ಮಹಿಳಾ ವಾರ್ಡನ್ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ. ಕಾನೂನು ಸಂಘರ್ಷಕ್ಕೆ ಒಳಗಾಗಿರುವ ಬಾಲಕ ಸೇರಿ ಇನ್ನೂ ಮೂವರನ್ನು ತನಿಖಾ ತಂಡ ಪತ್ತೆ ಮಾಡಬೇಕಿದೆ.