ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ನಾಲ್ಕು ತಿಂಗಳ ಹಿಂದೆ ಮಠಕ್ಕೆ ಸಂಬಂಧಿಸಿದಂತೆ ವದಂತಿಯೊಂದು ಹಬ್ಬಿತ್ತು. ಸಣ್ಣ ತಪ್ಪೊಂದು ದೊಡ್ಡ ಅಪರಾಧಕ್ಕೆ ಅವಕಾಶ ಆಗಬಾರದು ಎಂಬ ಉದ್ದೇಶದಿಂದ ಶಿಸ್ತುಕ್ರಮ ಜರುಗಿಸಲಾಗಿದೆ. ಮಠಕ್ಕೆ, ಶರಣರಿಗೆ ಸಾಮಾಜಿಕ ಬದ್ಧತೆ ಇದೆ. ಇದರ ಆಧಾರದ ಮೇರೆಗೆ ಮಠ ಕಟ್ಟಲಾಗುತ್ತಿದೆ’ ಎಂದು ಹೇಳಿದರು.