<p><strong>ಚಿತ್ರದುರ್ಗ</strong>: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ ಚಿತ್ರದುರ್ಗಕ್ಕೆ ಕರೆತಂದಿದ್ದಾರೆ. ಮಹಿಳಾ ಪೊಲೀಸರು ಇವರನ್ನು ಇಡಿ ದಿನ ವಿಚಾರಣೆ ನಡೆಸಿದ್ದಾರೆ. ಶರಣರ ವಿರುದ್ಧ ಹೇಳಿಕೆ ನೀಡುವಂತೆ ಮಠದಲ್ಲಿ ಹಾಸ್ಟೆಲ್ನಲ್ಲಿ ವ್ಯಾಸಂಗ ಮಾಡಿದ್ದ ತನ್ನ ಪುತ್ರಿಯರಿಗೆ ಕುಮ್ಮಕ್ಕು ನೀಡಿದ ಆರೋಪ ಈ ಮಹಿಳೆಯ ಮೇಲಿದೆ.<br /><br />ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ನೀಡಿದ ದೂರು ಆಧರಿಸಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಎಂಬುವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು. ಬಸವರಾಜನ್ ಪತ್ನಿ ಸೌಭಾಗ್ಯ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.</p>.<p><strong>ಸ್ಥಳ ಮಹಜರು:</strong></p>.<p>ಶಿವಮೂರ್ತಿ ಶರಣರ ಫೋಟೊಗಳು ಕಳವಾಗಿರುವ ಮಠದ ರಾಜಾಂಗಣದ ಸ್ಥಳ ಮಹಜರು ಶುಕ್ರವಾರ ನಡೆಯಿತು. ಪೊಲೀಸ್ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಎಂಬುವರನ್ನು ಮಠಕ್ಕೆ ಕರೆದೊಯ್ದ ತನಿಖಾ ತಂಡ ಸ್ಥಳ ಮಹಜರು ಮಾಡಿತು.</p>.<p><strong>ಜಾಮೀನು ಅರ್ಜಿ ವಜಾ:</strong></p>.<p>ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಇಬ್ಬರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.</p>.<p>ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಎಂಬುವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<p>ಮೈಸೂರಿನಲ್ಲಿದ್ದ ಇವರನ್ನು ಪೊಲೀಸರು ವಿಚಾರಣೆಗಾಗಿ ಶುಕ್ರವಾರ ನಸುಕಿನಲ್ಲಿ ಚಿತ್ರದುರ್ಗಕ್ಕೆ ಕರೆತಂದಿದ್ದಾರೆ. ಮಹಿಳಾ ಪೊಲೀಸರು ಇವರನ್ನು ಇಡಿ ದಿನ ವಿಚಾರಣೆ ನಡೆಸಿದ್ದಾರೆ. ಶರಣರ ವಿರುದ್ಧ ಹೇಳಿಕೆ ನೀಡುವಂತೆ ಮಠದಲ್ಲಿ ಹಾಸ್ಟೆಲ್ನಲ್ಲಿ ವ್ಯಾಸಂಗ ಮಾಡಿದ್ದ ತನ್ನ ಪುತ್ರಿಯರಿಗೆ ಕುಮ್ಮಕ್ಕು ನೀಡಿದ ಆರೋಪ ಈ ಮಹಿಳೆಯ ಮೇಲಿದೆ.<br /><br />ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಸ್ವಾಮೀಜಿ ನೀಡಿದ ದೂರು ಆಧರಿಸಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹಾಗೂ ಶಿಕ್ಷಕ ಬಸವರಾಜೇಂದ್ರ ಎಂಬುವರನ್ನು ಬಂಧಿಸಿದ್ದ ಪೊಲೀಸರು, ಶುಕ್ರವಾರ ಪ್ರತ್ಯೇಕವಾಗಿ ವಿಚಾರಣೆ ನಡೆಸಿದರು. ಬಸವರಾಜನ್ ಪತ್ನಿ ಸೌಭಾಗ್ಯ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.</p>.<p><strong>ಸ್ಥಳ ಮಹಜರು:</strong></p>.<p>ಶಿವಮೂರ್ತಿ ಶರಣರ ಫೋಟೊಗಳು ಕಳವಾಗಿರುವ ಮಠದ ರಾಜಾಂಗಣದ ಸ್ಥಳ ಮಹಜರು ಶುಕ್ರವಾರ ನಡೆಯಿತು. ಪೊಲೀಸ್ ವಶದಲ್ಲಿರುವ ಆರೋಪಿ ಶ್ರೀನಿವಾಸ್ ಎಂಬುವರನ್ನು ಮಠಕ್ಕೆ ಕರೆದೊಯ್ದ ತನಿಖಾ ತಂಡ ಸ್ಥಳ ಮಹಜರು ಮಾಡಿತು.</p>.<p><strong>ಜಾಮೀನು ಅರ್ಜಿ ವಜಾ:</strong></p>.<p>ಎರಡನೇ ಪೋಕ್ಸೊ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಇಬ್ಬರು ಆರೋಪಿಗಳು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ವಜಾ ಮಾಡಿದೆ.</p>.<p>ಆರೋಪಿಗಳಾದ ಮಹಾಲಿಂಗ ಮತ್ತು ಕರಿಬಸಪ್ಪ ಎಂಬುವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>