‘ವಿದ್ಯಾಪೀಠದ ಆಸ್ಪತ್ರೆ ಸಾರ್ವಜನಿಕ ಸೇವೆ ನೀಡುತ್ತಿದೆ. ಕೋವಿಡ್ ಪ್ರಥಮ ಅಲೆ ಎದುರಾದಾಗ 80 ಹಾಸಿಗೆ ಸಾಮರ್ಥ್ಯದ ವ್ಯವಸ್ಥೆ ಕಲ್ಪಿಸಲಾಗಿತ್ತು. ಈಗ 120 ರೋಗಿಗಳು ಏಕಕಾಲಕ್ಕೆ ಚಿಕಿತ್ಸೆ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ಇನ್ನು ಹೆಚ್ಚಿನ ಅಗತ್ಯ ಕಂಡುಬಂದಲ್ಲಿ ಹೋಟೆಲ್ ಅಥವಾ ಕಲ್ಯಾಣಮಂಟಪ ಬಾಡಿಗೆ ಪಡೆದು ಚಿಕಿತ್ಸೆ ನೀಡಲಾಗುವುದು. ಈ ಭಾಗದ ಜನರಿಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು’ ಎಂದು ಭರವಸೆ ನೀಡಿದರು.
ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಕೆ.ಎಸ್.ನವೀನ್, ಆಡಳಿತ ಮಂಡಳಿ ಸದಸ್ಯರಾದ ಕೆ.ವಿ.ಪ್ರಭಾಕರ್, ಎನ್.ಲಿಂಗಮೂರ್ತಿ, ಪಟೇಲ್ ಶಿವಕುಮಾರ್, ಹರ್ತಿಕೋಟೆ ವೀರೇಂದ್ರಸಿಂಹ, ಬಸವರಾಜ ಪಾಟೀಲ ಇದ್ದರು.