<p><strong>ಚಿತ್ರದುರ್ಗ: </strong>ಮುಸ್ಲಿಂ ಸಮುದಾಯಕ್ಕಿದ್ದ ಶೇ 4ರಷ್ಟು ಮೀಸಲಾತಿ ಸೌಲಭ್ಯವನ್ನು ರದ್ದುಪಡಿಸಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಒನಕೆ ಓಬವ್ವ ವೃತ್ತದತ್ತ ಮೆರವಣಿಗೆ ಮೂಲಕ ತೆರಳಲು ಹಾಗೂ ಬಹಿರಂಗ ಸಭೆ ನಡೆಸುವ ವಿಚಾರದಲ್ಲಿ ಪ್ರತಿಭಟನಕಾರರು ಪೊಲೀಸರ ನಡುವೆ ವಾಗ್ವಾದ ನಡೆಯಿತು.</p>.<p>ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವುದರಿಂದ ಇತರ ಹಿಂದುಳಿದ<br />ವರ್ಗ (ಒಬಿಸಿ) ಪ್ರವರ್ಗ ‘2ಬಿ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿತ್ತು. ವಿವಿಧ ಆಯೋಗಗಳು ಮೀಸಲಾತಿಗೆ<br />ಪೂರಕ ವರದಿ ನೀಡಿದ್ದವು. ಆದರೂ ಮುಸ್ಲಿಮರ ಏಳ್ಗೆ ಸಹಿಸದ ಬಿಜೆಪಿ ಈ ಸೌಲಭ್ಯ ರದ್ದುಪಡಿಸಿದೆ ಎಂದು ಆರೋಪಿಸಿದರು.</p>.<p>ಈವರೆಗೆ ನೀಡಲಾಗಿದ್ದ ಮೀಸಲು ಸೌಲಭ್ಯವನ್ನು ಮುಂದುವರಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು. ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್, ವಕೀಲ ಬಿ.ಕೆ. ರಹಮತ್ವುಲ್ಲಾ, ಎಸ್ಡಿಪಿಐ ಮುಖಂಡ ಜಾಕಿರ್ ಹುಸೇನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: </strong>ಮುಸ್ಲಿಂ ಸಮುದಾಯಕ್ಕಿದ್ದ ಶೇ 4ರಷ್ಟು ಮೀಸಲಾತಿ ಸೌಲಭ್ಯವನ್ನು ರದ್ದುಪಡಿಸಿದ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತರು ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಒನಕೆ ಓಬವ್ವ ವೃತ್ತದತ್ತ ಮೆರವಣಿಗೆ ಮೂಲಕ ತೆರಳಲು ಹಾಗೂ ಬಹಿರಂಗ ಸಭೆ ನಡೆಸುವ ವಿಚಾರದಲ್ಲಿ ಪ್ರತಿಭಟನಕಾರರು ಪೊಲೀಸರ ನಡುವೆ ವಾಗ್ವಾದ ನಡೆಯಿತು.</p>.<p>ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವುದರಿಂದ ಇತರ ಹಿಂದುಳಿದ<br />ವರ್ಗ (ಒಬಿಸಿ) ಪ್ರವರ್ಗ ‘2ಬಿ’ ಅಡಿಯಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿತ್ತು. ವಿವಿಧ ಆಯೋಗಗಳು ಮೀಸಲಾತಿಗೆ<br />ಪೂರಕ ವರದಿ ನೀಡಿದ್ದವು. ಆದರೂ ಮುಸ್ಲಿಮರ ಏಳ್ಗೆ ಸಹಿಸದ ಬಿಜೆಪಿ ಈ ಸೌಲಭ್ಯ ರದ್ದುಪಡಿಸಿದೆ ಎಂದು ಆರೋಪಿಸಿದರು.</p>.<p>ಈವರೆಗೆ ನೀಡಲಾಗಿದ್ದ ಮೀಸಲು ಸೌಲಭ್ಯವನ್ನು ಮುಂದುವರಿಸುವಂತೆ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು. ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್, ವಕೀಲ ಬಿ.ಕೆ. ರಹಮತ್ವುಲ್ಲಾ, ಎಸ್ಡಿಪಿಐ ಮುಖಂಡ ಜಾಕಿರ್ ಹುಸೇನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>