ಹಿರಿಯೂರು: ನಗರದಲ್ಲಿ ಅ. 27ರಂದು ಮೈಲಾರಲಿಂಗೇಶ್ವರಸ್ವಾಮಿಯ ಸರಪಳಿ ಪವಾಡ ನಡೆಯಲಿದೆ ಎಂದು ತಹಶೀಲ್ದಾರ್ ಜಿ.ಎಚ್.ಸತ್ಯನಾರಾಯಣ ತಿಳಿಸಿದರು.
ನಗರದ ತೇರುಮಲ್ಲೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ದಸರಾ ಆಚರಣೆ ಕಾರಣ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅ. 25ರಂದು ಆಯುಧಪೂಜೆ, 26ರಂದು ವಿಜಯದಶಮಿ ನಡೆಯಲಿದೆ. ಉತ್ಸವಗಳಲ್ಲಿ ಪಾಲ್ಗೊಳ್ಳುವ ಭಕ್ತರು ಅಂತರ ನಿರ್ವಹಣೆ ಮಾಡಬೇಕು. ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೋವಿಡ್–19 ನಿರ್ಲಕ್ಷಿಸುವುದು ಸಲ್ಲ. ಸರ್ಕಾರದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.
ಹಿರಿಯೂರು: ನಗರದಲ್ಲಿ ಅ. 27ರಂದು ಮೈಲಾರಲಿಂಗೇಶ್ವರಸ್ವಾಮಿಯ ಸರಪಳಿ ಪವಾಡ ನಡೆಯಲಿದೆ ಎಂದು ತಹಶೀಲ್ದಾರ್ ಜಿ.ಎಚ್.ಸತ್ಯನಾರಾಯಣ ತಿಳಿಸಿದರು.
ನಗರದ ತೇರುಮಲ್ಲೇಶ್ವರಸ್ವಾಮಿ ದೇಗುಲದ ಆವರಣದಲ್ಲಿ ದಸರಾ ಆಚರಣೆ ಕಾರಣ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅ. 25ರಂದು ಆಯುಧಪೂಜೆ, 26ರಂದು ವಿಜಯದಶಮಿ ನಡೆಯಲಿದೆ. ಉತ್ಸವಗಳಲ್ಲಿ ಪಾಲ್ಗೊಳ್ಳುವ ಭಕ್ತರು ಅಂತರ ನಿರ್ವಹಣೆ ಮಾಡಬೇಕು. ಜತೆಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಕೋವಿಡ್–19 ನಿರ್ಲಕ್ಷಿಸುವುದು ಸಲ್ಲ. ಸರ್ಕಾರದ ಸೂಚನೆಗಳನ್ನು ಎಲ್ಲರೂ ಪಾಲಿಸಬೇಕು ಎಂದು ಅವರು ಹೇಳಿದರು.