ಕಾಮಗಾರಿಯಲ್ಲಿ ಮಾನವ ದಿನಗಳ ಕುರಿತು ಪಿಡಿಒಗಳು ಪರಿಶೀಲನೆ ಮಾಡಬೇಕು. ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲೂ ದ್ರವ ತ್ಯಾಜ್ಯ ನಿರ್ವಹಣೆ ಘಟಕ ಆರಂಭಿಸಬೇಕು. ಅರ್ಹರಿಗೆ ಕೆಲಸ ನಿರ್ವಹಿಸಲು ಅವಕಾಶ ಕೊಡಬೇಕು. ಕೇವಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರಿಗೆ ಮಾತ್ರವಲ್ಲದೇ ಸಾಮಾನ್ಯ ಜನರಿಗೂ ಕಾಮಗಾರಿ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಪಂಚಾಯಿತಿವಾರು ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ 15 ದಿನಗಳೊಳಗೆ ವರದಿ ಒಪ್ಪಿಸಬೇಕು ಎಂದು ಸೂಚಿಸಿದರು.