<p>ಪ್ರಜಾವಾಣಿ ವಾರ್ತೆ</p>.<p>ಚಿತ್ರದುರ್ಗ: ‘ಆರೋಗ್ಯವಂತ ಮಕ್ಕಳು ಸದೃಢ ದೇಶದ ಅಡಿಪಾಯ. ಆದ್ದರಿಂದ ಅವರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ರಮುಖವಾಗಿ ಜಂತುಹುಳು ಸೋಂಕಿನಿಂದ ರಕ್ಷಿಸಬೇಕಿದೆ’ ಎಂದು ತಹಶೀಲ್ದಾರ್ ಬಿ.ಎಂ. ಗೋವಿಂದರಾಜು ತಿಳಿಸಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂತರ ಇಲಾಖೆ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ರಾಷ್ಟ್ರೀಯ ಕಾರ್ಯಕ್ರಮಗಳ ಯಶಸ್ವಿಗೆ ಪೂರ್ವಸಿದ್ಧತೆ ಮುಖ್ಯ. ಒಂದು ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ತಪ್ಪದೇ ಜಂತುಹುಳು ನಿವಾರಣಾ ಮಾತ್ರೆಯನ್ನು ಸೇವಿಸಬೇಕು’ ಎಂದರು.</p>.<p>‘ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ಈಗಾಗಲೇ ಮಾತ್ರೆಗಳನ್ನು ವಿತರಿಸಲಾಗಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಾಲೆ ಬಿಟ್ಟಿರುವ ಯಾವುದೇ ಮಗು ಈ ಸೌಲಭ್ಯದಿಂದ ವಂಚಿತ ಆಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನಲ್ಲಿ ಈ ಬಾರಿ 1,14,291 ಮಕ್ಕಳನ್ನು ಗುರಿಯಾಗಿಸಿದ್ದು, ಫೆ.10 ರಂದು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಂದು ಮಾತ್ರೆ ಪಡೆಯದವರಿಗೆ ಫೆಬ್ರವರಿ 17 ರಂದು ಮ್ಯಾಪ್–ಅಪ್ ಡೇ ಮೂಲಕ ಮಾತ್ರೆ ನೀಡಲಾಗುತ್ತದೆ. 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ 2 ವರ್ಷ ಮೇಲ್ಪಟ್ಟವರಿಗೆ 400 ಮಿ.ಗ್ರಾಂ ನ ಒಂದು ಪೂರ್ಣ ಮಾತ್ರೆಯನ್ನು ನೀಡಲಾಗುತ್ತದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಂಡು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್ ಮನವಿ ಮಾಡಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ವೀಣಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ವೈದ್ಯಾಧಿಕಾರಿಗಳಾದ ಮಹೇಂದ್ರ, ಮಂಜುಳಾ, ವಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಜಾವಾಣಿ ವಾರ್ತೆ</p>.<p>ಚಿತ್ರದುರ್ಗ: ‘ಆರೋಗ್ಯವಂತ ಮಕ್ಕಳು ಸದೃಢ ದೇಶದ ಅಡಿಪಾಯ. ಆದ್ದರಿಂದ ಅವರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಪ್ರಮುಖವಾಗಿ ಜಂತುಹುಳು ಸೋಂಕಿನಿಂದ ರಕ್ಷಿಸಬೇಕಿದೆ’ ಎಂದು ತಹಶೀಲ್ದಾರ್ ಬಿ.ಎಂ. ಗೋವಿಂದರಾಜು ತಿಳಿಸಿದರು.</p>.<p>ತಾಲ್ಲೂಕು ಕಚೇರಿಯಲ್ಲಿ ಸೋಮವಾರ ಆಯೋಜಿಸಲಾಗಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಅಂತರ ಇಲಾಖೆ ಅಧಿಕಾರಿಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ರಾಷ್ಟ್ರೀಯ ಕಾರ್ಯಕ್ರಮಗಳ ಯಶಸ್ವಿಗೆ ಪೂರ್ವಸಿದ್ಧತೆ ಮುಖ್ಯ. ಒಂದು ವರ್ಷದಿಂದ 19 ವರ್ಷದೊಳಗಿನ ಎಲ್ಲಾ ಮಕ್ಕಳು ತಪ್ಪದೇ ಜಂತುಹುಳು ನಿವಾರಣಾ ಮಾತ್ರೆಯನ್ನು ಸೇವಿಸಬೇಕು’ ಎಂದರು.</p>.<p>‘ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ಈಗಾಗಲೇ ಮಾತ್ರೆಗಳನ್ನು ವಿತರಿಸಲಾಗಿದೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಾಲೆ ಬಿಟ್ಟಿರುವ ಯಾವುದೇ ಮಗು ಈ ಸೌಲಭ್ಯದಿಂದ ವಂಚಿತ ಆಗದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸೂಕ್ತ ಕ್ರಮ ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು’ ಎಂದು ತಿಳಿಸಿದರು.</p>.<p>‘ತಾಲ್ಲೂಕಿನಲ್ಲಿ ಈ ಬಾರಿ 1,14,291 ಮಕ್ಕಳನ್ನು ಗುರಿಯಾಗಿಸಿದ್ದು, ಫೆ.10 ರಂದು ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅಂದು ಮಾತ್ರೆ ಪಡೆಯದವರಿಗೆ ಫೆಬ್ರವರಿ 17 ರಂದು ಮ್ಯಾಪ್–ಅಪ್ ಡೇ ಮೂಲಕ ಮಾತ್ರೆ ನೀಡಲಾಗುತ್ತದೆ. 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಮಾತ್ರೆ ಹಾಗೂ 2 ವರ್ಷ ಮೇಲ್ಪಟ್ಟವರಿಗೆ 400 ಮಿ.ಗ್ರಾಂ ನ ಒಂದು ಪೂರ್ಣ ಮಾತ್ರೆಯನ್ನು ನೀಡಲಾಗುತ್ತದೆ. ಎಲ್ಲಾ ಶಿಕ್ಷಣ ಸಂಸ್ಥೆಗಳು ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಂಡು ಆರೋಗ್ಯ ಇಲಾಖೆಯೊಂದಿಗೆ ಸಹಕರಿಸಬೇಕು’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಬಿ.ವಿ.ಗಿರೀಶ್ ಮನವಿ ಮಾಡಿದರು.</p>.<p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ವೀಣಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ, ವೈದ್ಯಾಧಿಕಾರಿಗಳಾದ ಮಹೇಂದ್ರ, ಮಂಜುಳಾ, ವಾಣಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>