‘ಭಾರತೀಯ ವಾಲಿಬಾಲ್ ಫೆಡರೇಷನ್ ಪ್ರತಿನಿಧಿಗಳಾದ ಆಂಥೋನಿ ಜೋಸೆಫ್ ಹಾಗೂ ಶ್ರೀಧರನ್ ಅವರು ಗುರುವಾರ ಚಿತ್ರದುರ್ಗಕ್ಕೆ ಭೇಟಿ ನೀಡಿ ಮೈದಾನ ಪರಿಶೀಲಿಸಿದರು. ಆಟ ಆಡುವುದು ಅಸಾಧ್ಯವೆಂದು ಶಿಫಾರಸು ಮಾಡಿದ್ದರಿಂದ ಟೂರ್ನಿಯನ್ನು ಮುಂದೂಡಲಾಗಿದೆ. 2022ರ ಜನವರಿ ಅಥವಾ ಫೆಬ್ರುವರಿಯಲ್ಲಿ ಟೂರ್ನಿ ಆಯೋಜಿಸಲಾಗುವುದು’ ಎಂದು ಶರಣ ಸಂಸ್ಕೃತಿ ಉತ್ಸವ ಸಮಿತಿಯ ಗೌರವ ಅಧ್ಯಕ್ಷರಾದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾಹಿತಿ ನೀಡಿದರು.