‘ನೈಸರ್ಗಿಕ ಪದ್ಧತಿಯಲ್ಲಿ ಬಿತ್ತನೆ ಮಾಡಲು ಈ ವರ್ಷ ಸಿದ್ದಯ್ಯನಕೋಟೆ, ಸೂಲೇನಹಳ್ಳಿ, ಸೋಮೇನಹಳ್ಳಿ ಗ್ರಾಮಗಳನ್ನು ಆಯ್ಕೆ ಮಾಡಲಾಗಿತ್ತು. ಪ್ರತಿ ಗ್ರಾಮದಲ್ಲಿ 35 ಹೆಕ್ಟೇರ್ನಂತೆ ಒಟ್ಟು ಮೂರು ಗ್ರಾಮಗಳಿಂದ 105 ಹೆಕ್ಟೇರ್ನಲ್ಲಿ ಬಿತ್ತನೆ ಮಾಡಲಾಗಿದೆ. ಇದಕ್ಕೆ ಸರ್ಕಾರದಿಂದ ಪ್ರತಿ ಹೆಕ್ಟೇರ್ಗೆ ₹ 3,600 ಪ್ರೋತ್ಸಾಹಧನ ನೀಡಲಾಗುತ್ತದೆ. ಇದರಲ್ಲಿ ಕೃಷಿಗೆ ಅಗತ್ಯವಿರುವ ಜೀವಾಮೃತ ಸಿದ್ಧತೆಯನ್ನು ಸ್ವತಃ ರೈತರು ಮಾಡಿಕೊಳ್ಳಬೇಕಿದೆ’ ಎಂದು ಕೃಷಿ ಇಲಾಖೆ ಸಾವಯವ ಅಧಿಕಾರಿ ರಾಜಣ್ಣ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.