<p><strong>ನಾಯಕನಹಟ್ಟಿ</strong>: ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ನಾಲ್ಕು ತಿಂಗಳ ನಂತರ ಹುಂಡಿ ಹಣದ ಎಣಿಕೆ ಕಾರ್ಯವನ್ನು ಶನಿವಾರ ದೇವಾಲಯದ ಆವರಣದಲ್ಲಿ ಬ್ಯಾಂಕ್ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.</p>.<p>ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರ್ ಹಾಗೂ ದೇವಾಲಯ ಕಾರ್ಯನಿರ್ವಹಕ ಅಧಿಕಾರಿಯವರ ನೇತೃತ್ವದಲ್ಲಿ ಬೆಳಗ್ಗೆ 9ಗಂಟೆಗೆ ಆರಂಭವಾದ ಎಣಿಕೆ ಕಾರ್ಯ 12 ಗಂಟೆಗೆ ಮುಕ್ತಾಯವಾಯಿತು. ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಮಧ್ಯಾಹ್ನ 3.30ಕ್ಕೆ ಮುಕ್ತಾಯವಾಯಿತು.</p>.<p>ಹೊರಮಠದಲ್ಲಿ ₹ 8.38 ಲಕ್ಷ ಹಾಗೂ ಒಳಮಠದಲ್ಲಿ ₹ 25.91 ಲಕ್ಷ ಒಟ್ಟು ₹ 34.30 ಹಣ ಸಂಗ್ರಹವಾಗಿದೆ. ಮಾರ್ಚ್ 6ರಂದು ವಾರ್ಷಿಕ ಮಹಾಜಾತ್ರೆ ನಡೆಯಲಿದ್ದು, ಪೂರ್ವಭಾವಿಯಾಗಿ ಹುಂಡಿಯನ್ನು ತೆರೆಯಲಾಗಿದೆ. ಶನಿವಾರ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ದೇವಾಲಯದ ಕೆನರಾಬ್ಯಾಂಕ್ ಖಾತೆಗೆ ಹಾಕಲಾಯಿತು.</p>.<p>ಕಾರ್ಯನಿರ್ವಹಕಾಧಿಕಾರಿ ಎಚ್. ಗಂಗಾಧರಪ್ಪ, ಶಿರಸ್ಥೆದಾರ್ ಸದಾಶಿವಪ್ಪ, ಕಂದಾಯ ನಿರೀಕ್ಷಕ ಚೇತನ್ ಕುಮಾರ್, ಕೆನರಾಬ್ಯಾಂಕ್ ವ್ಯವಸ್ಥಾಪಕ ರತನ್ ಕುಮಾರ್ ದಯಾ, ವಿಜಯಭಾಸ್ಕರ್, ವಿವೇಕ್, ಮನೋಹರ್, ಎಂ.ಬಿ. ಮಹಾಸ್ವಾಮಿ, ವೀರಭದ್ರಪ್ಪ, ಪ್ರಸನ್ನಕುಮಾರ್ ಸೇರಿದಂತೆ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು, ಮುಜುರಾಯಿ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ</strong>: ಐತಿಹಾಸಿಕ ಗುರುತಿಪ್ಪೇರುದ್ರಸ್ವಾಮಿ ದೇವಾಲಯದಲ್ಲಿ ನಾಲ್ಕು ತಿಂಗಳ ನಂತರ ಹುಂಡಿ ಹಣದ ಎಣಿಕೆ ಕಾರ್ಯವನ್ನು ಶನಿವಾರ ದೇವಾಲಯದ ಆವರಣದಲ್ಲಿ ಬ್ಯಾಂಕ್ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳ ಸಹಯೋಗದಲ್ಲಿ ನಡೆಸಲಾಯಿತು.</p>.<p>ಮೊದಲು ಹೊರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರ್ ಹಾಗೂ ದೇವಾಲಯ ಕಾರ್ಯನಿರ್ವಹಕ ಅಧಿಕಾರಿಯವರ ನೇತೃತ್ವದಲ್ಲಿ ಬೆಳಗ್ಗೆ 9ಗಂಟೆಗೆ ಆರಂಭವಾದ ಎಣಿಕೆ ಕಾರ್ಯ 12 ಗಂಟೆಗೆ ಮುಕ್ತಾಯವಾಯಿತು. ನಂತರ ಒಳಮಠದಲ್ಲಿ ಆರಂಭವಾದ ಎಣಿಕೆ ಕಾರ್ಯ ಮಧ್ಯಾಹ್ನ 3.30ಕ್ಕೆ ಮುಕ್ತಾಯವಾಯಿತು.</p>.<p>ಹೊರಮಠದಲ್ಲಿ ₹ 8.38 ಲಕ್ಷ ಹಾಗೂ ಒಳಮಠದಲ್ಲಿ ₹ 25.91 ಲಕ್ಷ ಒಟ್ಟು ₹ 34.30 ಹಣ ಸಂಗ್ರಹವಾಗಿದೆ. ಮಾರ್ಚ್ 6ರಂದು ವಾರ್ಷಿಕ ಮಹಾಜಾತ್ರೆ ನಡೆಯಲಿದ್ದು, ಪೂರ್ವಭಾವಿಯಾಗಿ ಹುಂಡಿಯನ್ನು ತೆರೆಯಲಾಗಿದೆ. ಶನಿವಾರ ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ದೇವಾಲಯದ ಕೆನರಾಬ್ಯಾಂಕ್ ಖಾತೆಗೆ ಹಾಕಲಾಯಿತು.</p>.<p>ಕಾರ್ಯನಿರ್ವಹಕಾಧಿಕಾರಿ ಎಚ್. ಗಂಗಾಧರಪ್ಪ, ಶಿರಸ್ಥೆದಾರ್ ಸದಾಶಿವಪ್ಪ, ಕಂದಾಯ ನಿರೀಕ್ಷಕ ಚೇತನ್ ಕುಮಾರ್, ಕೆನರಾಬ್ಯಾಂಕ್ ವ್ಯವಸ್ಥಾಪಕ ರತನ್ ಕುಮಾರ್ ದಯಾ, ವಿಜಯಭಾಸ್ಕರ್, ವಿವೇಕ್, ಮನೋಹರ್, ಎಂ.ಬಿ. ಮಹಾಸ್ವಾಮಿ, ವೀರಭದ್ರಪ್ಪ, ಪ್ರಸನ್ನಕುಮಾರ್ ಸೇರಿದಂತೆ ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿಗಳು, ಮುಜುರಾಯಿ ಇಲಾಖೆಯ ಅಧಿಕಾರಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>