ರಥೋತ್ಸವಕ್ಕೆ ಮಧ್ಯಾಹ್ನ 2 ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭವಾದವು. ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಪಲ್ಲಕ್ಕಿಯಲ್ಲಿ ವಿರಾಜಮಾನವಾಗಿದ್ದ ತಿಪ್ಪೇರುದ್ರಸ್ವಾಮಿಯ ವಿಗ್ರಹವನ್ನು ರಥದತ್ತ ಕೊಂಡೊಯ್ಯಲಾಯಿತು. ಮುಕ್ತಿ ಭಾವುಟ ಹರಾಜು ಪ್ರಕ್ರಿಯೆ ಮುಕ್ತವಾಯವಾದ ಬಳಿಕ ರಥ ಮುಂದಡಿ ಇಟ್ಟಿತು. ಸಾರಿಗೆ ಸಚಿವ ಬಿ.ಶ್ರೀರಾಮುಲು, ಶಾಸಕ ಟಿ.ರಘುಮೂರ್ತಿ, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಾಕ್ಷಿಯಾದರು. ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.