<p><strong>ನಾಯಕನಹಟ್ಟಿ : '</strong>ಸಾಮಾಜಿಕ ಭದ್ರತಾ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ' ಎಂದು ಜಿ.ಪಂ.ಯೋಜನಾ ನಿರ್ದೇಶಕಿ ಸಿ.ಎಸ್.ಗಾಯತ್ರಿ ತಿಳಿಸಿದರು.</p>.<p>ತುರುವನೂರು ಗ್ರಾಮದಲ್ಲಿ ಕೆನರಾಬ್ಯಾಂಕ್ ಶಾಖೆಯು ಹಮ್ಮಿಕೊಂಡಿದ್ದ ಸಾಮಾಜಿಕ ಭದ್ರತಾ ಯೋಜನೆಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ‘ಮಹಿಳೆಯರು ಆರ್ಥಿಕ ಸಬಲೀಕರಣದ ಜೊತೆಗೆ ಸಾಮಾಜಿಕ ಭದ್ರತೆಯ ಕಡೆಗೂ ಗಮನ ಹರಿಸಬೇಕು’ ಎಂದುರು.</p>.<p>‘ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಆರ್ಥಿಕ ಸ್ವಾವಲಂಬನೆಯಲ್ಲಿ ದಿಟ್ಟ ಹೆಜ್ಜೆ ಇರಿಸಿದ್ದಾರೆ. ಜೊತೆಗೆ ಸಾರ್ವಜನಿಕರು ತಮ್ಮ ದುಡಿಮೆಯ ಅವಧಿಯಲ್ಲಿ ವೃದ್ಧಾಪ್ಯ ಮತ್ತು ಅಕಸ್ಮಿಕವಾಗಿ ಸಂಭವಿಸುವ ಅವಘಡಗಳಿಗೆ ಸಿದ್ಧತೆಯನ್ನು ಹೊಂದಿರಬೇಕು. ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಇಂಥಹ ಹಲವಾರು ಯೋಜನೆಗಳನ್ನ ರೂಪಿಸಿದೆ’ ಎಂದರು</p>.<p>‘ಪ್ರಧಾನಮಂತ್ರಿ ಜೀವನಜ್ಯೋತಿ ಯೋಜನೆಯಲ್ಲಿ ಕೇವಲ ₹.436 ನೀಡಿ ₹.2 ಲಕ್ಷ ಮೊತ್ತದ ಜೀವವಿಮೆ ಪಡೆಯಬಹುದು. ಸುರಕ್ಷಾ ವಿಮಾ ಯೋಜನೆಯಲ್ಲಿ ವರ್ಷಕ್ಕೆ ₹.20 ಪಾವತಿಸಿ ₹.2 ಲಕ್ಷ ವಿಮಾ ರಕ್ಷಣೆ ಪಡೆಯಬಹುದು. ಇಂಥಹ ಸಾಮಾಜಿಕ ಭದ್ರತಾ ಯೋಜನೆಗಳು ವ್ಯಕ್ತಿ ಅವಲಂಬಿತ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ಹಾಗೂ ಕುಟುಂಬದ ರಕ್ಷಣೆಗೆ ಸಹಕಾರಿಯಾಗುತ್ತವೆ’ ಎಂದರು.</p>.<p>‘ಅಂಗವಿಕಲರು, ವೃದ್ಧರು, ವಿಧವೆಯರಿಗೆ ಸಾಮಾಜಿಕ ಭದ್ರತ ಯೋಜನೆಗಳು ತಲುಪಬೇಕು. ಇದಕ್ಕಾಗಿ ಸಾರ್ವಜನಿಕರು ಸಹಕಾರ ನೀಡಬೇಕು. ಜುಲೈ ತಿಂಗಳು ಈ ಅಭಿಯಾನವನ್ನು ಕೆನರಾಬ್ಯಾಂಕ್ನ ಎಲ್ಲಾ ಸರ್ಕಾರೇತರ ಸಂಸ್ಥೆಗಳ ಜೊತೆಗೆ ಆಯೋಜಿಸಿದೆ. ಸಮಾಜದಲ್ಲಿನ ಪ್ರತಿ ವ್ಯಕ್ತಿಯೂ ಸಾಮಾಜಿಕ ಭದ್ರತೆಯ ಯೋಜನೆಯನ್ನು ಹೊಂದಿರಬೇಕೆಂದು’ ಸಿ.ಎಸ್.ಗಾಯತ್ರಿ ಮಾಹಿತಿ ನೀಡಿದರು.</p>.<p>ಚಿತ್ರದುರ್ಗ ಲೀಡ್ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ, ಗ್ರಾ.ಪಂ. ಪಿಡಿಒ ಖಲೀಮ್, ಕೂನಬೇವು ಪಿಡಿಒ ಧನಂಜಯ, ಗ್ರಾ.ಪಂ.ಅಧ್ಯಕ್ಷೆ ನಾಗರತ್ನ, ಆರ್ಥಿಕ ಸಾಕ್ಷರತೆ ಸಲಹೆಗಾರ ತಿಪ್ಪೇಸ್ವಾಮಿ, ತುರುವನೂರು ಕೆನರಾ ಬ್ಯಾಂಕ್ ವ್ಯವಸ್ಥಾಪಕ ಕೆ.ಓ.ಕುಶಾಲ್ಕುಮಾರ್, ಸಂಪನ್ಮೂಲ ವ್ಯಕ್ತಿ ಉದಯ್ ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ : '</strong>ಸಾಮಾಜಿಕ ಭದ್ರತಾ ಯೋಜನೆಗಳು ಮಹಿಳಾ ಸಬಲೀಕರಣಕ್ಕೆ ಸಹಕಾರಿಯಾಗಿದೆ' ಎಂದು ಜಿ.ಪಂ.ಯೋಜನಾ ನಿರ್ದೇಶಕಿ ಸಿ.ಎಸ್.ಗಾಯತ್ರಿ ತಿಳಿಸಿದರು.</p>.<p>ತುರುವನೂರು ಗ್ರಾಮದಲ್ಲಿ ಕೆನರಾಬ್ಯಾಂಕ್ ಶಾಖೆಯು ಹಮ್ಮಿಕೊಂಡಿದ್ದ ಸಾಮಾಜಿಕ ಭದ್ರತಾ ಯೋಜನೆಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ‘ಮಹಿಳೆಯರು ಆರ್ಥಿಕ ಸಬಲೀಕರಣದ ಜೊತೆಗೆ ಸಾಮಾಜಿಕ ಭದ್ರತೆಯ ಕಡೆಗೂ ಗಮನ ಹರಿಸಬೇಕು’ ಎಂದುರು.</p>.<p>‘ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಆರ್ಥಿಕ ಸ್ವಾವಲಂಬನೆಯಲ್ಲಿ ದಿಟ್ಟ ಹೆಜ್ಜೆ ಇರಿಸಿದ್ದಾರೆ. ಜೊತೆಗೆ ಸಾರ್ವಜನಿಕರು ತಮ್ಮ ದುಡಿಮೆಯ ಅವಧಿಯಲ್ಲಿ ವೃದ್ಧಾಪ್ಯ ಮತ್ತು ಅಕಸ್ಮಿಕವಾಗಿ ಸಂಭವಿಸುವ ಅವಘಡಗಳಿಗೆ ಸಿದ್ಧತೆಯನ್ನು ಹೊಂದಿರಬೇಕು. ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಇಂಥಹ ಹಲವಾರು ಯೋಜನೆಗಳನ್ನ ರೂಪಿಸಿದೆ’ ಎಂದರು</p>.<p>‘ಪ್ರಧಾನಮಂತ್ರಿ ಜೀವನಜ್ಯೋತಿ ಯೋಜನೆಯಲ್ಲಿ ಕೇವಲ ₹.436 ನೀಡಿ ₹.2 ಲಕ್ಷ ಮೊತ್ತದ ಜೀವವಿಮೆ ಪಡೆಯಬಹುದು. ಸುರಕ್ಷಾ ವಿಮಾ ಯೋಜನೆಯಲ್ಲಿ ವರ್ಷಕ್ಕೆ ₹.20 ಪಾವತಿಸಿ ₹.2 ಲಕ್ಷ ವಿಮಾ ರಕ್ಷಣೆ ಪಡೆಯಬಹುದು. ಇಂಥಹ ಸಾಮಾಜಿಕ ಭದ್ರತಾ ಯೋಜನೆಗಳು ವ್ಯಕ್ತಿ ಅವಲಂಬಿತ ಕುಟುಂಬಕ್ಕೆ ಸ್ವಲ್ಪ ನೆಮ್ಮದಿ ಹಾಗೂ ಕುಟುಂಬದ ರಕ್ಷಣೆಗೆ ಸಹಕಾರಿಯಾಗುತ್ತವೆ’ ಎಂದರು.</p>.<p>‘ಅಂಗವಿಕಲರು, ವೃದ್ಧರು, ವಿಧವೆಯರಿಗೆ ಸಾಮಾಜಿಕ ಭದ್ರತ ಯೋಜನೆಗಳು ತಲುಪಬೇಕು. ಇದಕ್ಕಾಗಿ ಸಾರ್ವಜನಿಕರು ಸಹಕಾರ ನೀಡಬೇಕು. ಜುಲೈ ತಿಂಗಳು ಈ ಅಭಿಯಾನವನ್ನು ಕೆನರಾಬ್ಯಾಂಕ್ನ ಎಲ್ಲಾ ಸರ್ಕಾರೇತರ ಸಂಸ್ಥೆಗಳ ಜೊತೆಗೆ ಆಯೋಜಿಸಿದೆ. ಸಮಾಜದಲ್ಲಿನ ಪ್ರತಿ ವ್ಯಕ್ತಿಯೂ ಸಾಮಾಜಿಕ ಭದ್ರತೆಯ ಯೋಜನೆಯನ್ನು ಹೊಂದಿರಬೇಕೆಂದು’ ಸಿ.ಎಸ್.ಗಾಯತ್ರಿ ಮಾಹಿತಿ ನೀಡಿದರು.</p>.<p>ಚಿತ್ರದುರ್ಗ ಲೀಡ್ಬ್ಯಾಂಕ್ ವ್ಯವಸ್ಥಾಪಕ ಎಂ.ರಾಘವೇಂದ್ರ, ಗ್ರಾ.ಪಂ. ಪಿಡಿಒ ಖಲೀಮ್, ಕೂನಬೇವು ಪಿಡಿಒ ಧನಂಜಯ, ಗ್ರಾ.ಪಂ.ಅಧ್ಯಕ್ಷೆ ನಾಗರತ್ನ, ಆರ್ಥಿಕ ಸಾಕ್ಷರತೆ ಸಲಹೆಗಾರ ತಿಪ್ಪೇಸ್ವಾಮಿ, ತುರುವನೂರು ಕೆನರಾ ಬ್ಯಾಂಕ್ ವ್ಯವಸ್ಥಾಪಕ ಕೆ.ಓ.ಕುಶಾಲ್ಕುಮಾರ್, ಸಂಪನ್ಮೂಲ ವ್ಯಕ್ತಿ ಉದಯ್ ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>