<p><strong>ನಾಯಕನಹಟ್ಟಿ:</strong> ಹೋಬಳಿಯ ಹಲವೆಡೆಗಳಲ್ಲಿ ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮತ್ತು ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ.</p>.<p>ಶುಕ್ರವಾರ ಸಂಜೆ ಆರಂಭವಾದ ಬಿರುಗಾಳಿ ಸಹಿತ ಮಳೆಗೆ ನಾಯಕನಹಟ್ಟಿ ಪಟ್ಟಣದ ಚಳ್ಳಕೆರೆ ರಸ್ತೆಯ ದೊಡ್ಡಹಳ್ಳದ ಸಮೀಪವಿರುವ ಸಿಮೆಂಟ್ ಇಟ್ಟಿಗೆ ಫ್ಯಾಕ್ಟರಿಯ ಚಾವಣಿ ಹಾರಿಹೋಗಿದೆ. ಇದರ ಪರಿಣಾಮ 100ಕ್ಕೂ ಹೆಚ್ಚು ಸಿಮೆಂಟ್ ಚೀಲಗಳು ತೊಯ್ದಿವೆ.</p>.<p>ಸಮೀಪದಲ್ಲಿ ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದ ನಾಯಕನಹಟ್ಟಿ, ಮನುಮೈನಹಟ್ಟಿ, ಕುದಾಪುರ, ಐಐಎಸ್ಸಿ, ಡಿಆರ್ಡಿಒ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಯಿತು.</p>.<p>ಜೋಗಿಹಟ್ಟಿ ಗೌಡಗೆರೆ ಸಮೀಪ ವಿದ್ಯುತ್ ಕಂಬ ಮುರಿದಿದೆ. ಗಜ್ಜುಗಾನಹಳ್ಳಿ ರಾಮಸಾಗರ ಮಧ್ಯೆಯೂ ವಿದ್ಯುತ್ ಕಂಬಗಳು ಮುರಿದಿವೆ. ಎನ್.ಮಹದೇವಪುರ ಗ್ರಾಮದ ಹೊರವಲಯದ ಹಳ್ಳದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ಮಲ್ಲೂರಹಳ್ಳಿ, ಅಬ್ವೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧಾರಣವಾಗಿ ಮಳೆಯಾದರೆ, ತಿಮ್ಮಪ್ಪಯ್ಯನಹಳ್ಳಿ, ಎನ್.ದೇವರಹಳ್ಳಿ, ನೇರಲಗುಂಟೆ, ನೆಲಗೇತನಹಟ್ಟಿ, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಹದವಾಗಿ ಮಳೆಯಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-44-1273458567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ:</strong> ಹೋಬಳಿಯ ಹಲವೆಡೆಗಳಲ್ಲಿ ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮತ್ತು ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಮತ್ತು ಮರಗಳು ಧರೆಗುರುಳಿವೆ.</p>.<p>ಶುಕ್ರವಾರ ಸಂಜೆ ಆರಂಭವಾದ ಬಿರುಗಾಳಿ ಸಹಿತ ಮಳೆಗೆ ನಾಯಕನಹಟ್ಟಿ ಪಟ್ಟಣದ ಚಳ್ಳಕೆರೆ ರಸ್ತೆಯ ದೊಡ್ಡಹಳ್ಳದ ಸಮೀಪವಿರುವ ಸಿಮೆಂಟ್ ಇಟ್ಟಿಗೆ ಫ್ಯಾಕ್ಟರಿಯ ಚಾವಣಿ ಹಾರಿಹೋಗಿದೆ. ಇದರ ಪರಿಣಾಮ 100ಕ್ಕೂ ಹೆಚ್ಚು ಸಿಮೆಂಟ್ ಚೀಲಗಳು ತೊಯ್ದಿವೆ.</p>.<p>ಸಮೀಪದಲ್ಲಿ ನಾಲ್ಕು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಇದರಿಂದ ನಾಯಕನಹಟ್ಟಿ, ಮನುಮೈನಹಟ್ಟಿ, ಕುದಾಪುರ, ಐಐಎಸ್ಸಿ, ಡಿಆರ್ಡಿಒ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಯಿತು.</p>.<p>ಜೋಗಿಹಟ್ಟಿ ಗೌಡಗೆರೆ ಸಮೀಪ ವಿದ್ಯುತ್ ಕಂಬ ಮುರಿದಿದೆ. ಗಜ್ಜುಗಾನಹಳ್ಳಿ ರಾಮಸಾಗರ ಮಧ್ಯೆಯೂ ವಿದ್ಯುತ್ ಕಂಬಗಳು ಮುರಿದಿವೆ. ಎನ್.ಮಹದೇವಪುರ ಗ್ರಾಮದ ಹೊರವಲಯದ ಹಳ್ಳದಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿವೆ.</p>.<p>ಮಲ್ಲೂರಹಳ್ಳಿ, ಅಬ್ವೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಧಾರಣವಾಗಿ ಮಳೆಯಾದರೆ, ತಿಮ್ಮಪ್ಪಯ್ಯನಹಳ್ಳಿ, ಎನ್.ದೇವರಹಳ್ಳಿ, ನೇರಲಗುಂಟೆ, ನೆಲಗೇತನಹಟ್ಟಿ, ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಹದವಾಗಿ ಮಳೆಯಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-44-1273458567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>