ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಲನೆಯಲ್ಲಿ ಗೊಂದಲ: ಹೊಸ ಕಾರು ಅಡ್ಡಾದಿಡ್ಡಿ ಚಾಲನೆ, ಅಪಘಾತದಲ್ಲಿ ಮೂವರಿಗೆ ಗಾಯ

Last Updated 4 ಅಕ್ಟೋಬರ್ 2022, 2:22 IST
ಅಕ್ಷರ ಗಾತ್ರ

ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದಲ್ಲಿ ಸೋಮವಾರ ಹೊಸ ಕಾರನ್ನು ಚಾಲಕ ಅಡ್ಡಾದಿಡ್ಡಿ ಚಾಲಾಯಿಸಿದ ಪರಿಣಾಮ ಮೂವರು ಗಾಯಗೊಂಡಿದ್ದಾರೆ.

ಗ್ರಾಮದ ಜನನಿಬಿಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೊದಲು ಪಾದಚಾರಿ ಗಂಗಣ್ಣ ಎಂಬುವವರಿಗೆ ಡಿಕ್ಕಿ ಹೊಡೆದಿದೆ. ನಂತರ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಣ್ಣಮಾರಣ್ಣ ಮತ್ತು ಸಂಬಂಧಿ ಕಾರ್ತಿಕ್ ಎಂಬುವವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರ ಕಾಲುಗಳಿಗೆ ತೀವ್ರ ಪೆಟ್ಟು ಬಿದ್ದಿದೆ ಎನ್ನಲಾಗಿದೆ.

ಸಮೀಪದ ಕೋನಾಪುರ ಗ್ರಾಮದ ಹನುಮಂತ ಕಾರು ಚಾಲನೆ ಮಾಡಿದ ವ್ಯಕ್ತಿ. ಈಚೆಗಷ್ಟೇ ಕಾರು ಖರೀದಿಸಲಾಗಿತ್ತು ಎಂದು ತಿಳಿದುಬಂದಿದೆ. ರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಗಾದಿಲಿಂಗಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT