<p><strong>ಚಳ್ಳಕೆರೆ: </strong>ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ಶಿಕ್ಷಣ ನೀತಿ ಸಮಾಜದ ಬದಲಾವಣೆಗೆ ಪೂರಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ ಅಭಿಪ್ರಾಯಪಟ್ಟರು.</p>.<p>ನಗರದ ಆದರ್ಶ ವಿದ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಶಿಕ್ಷಣ ಇಲಾಖೆಯ ಅನುಷ್ಠಾನಾಧಿಕಾರಿಗಳಿಂದ ಆಯೋಜಿಸಿದ್ದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳ ಓದಿಗೆ ಪೂರಕವಾದ ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ವೈಜ್ಞಾನಿಕ ಅಂಶಗಳು ಹೊಸ ನೀತಿಯಲ್ಲಿ ನಿರೂಪಿತವಾಗಿವೆ. ಆದ್ದರಿಂದ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.</p>.<p>ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಮಂಜಣ್ಣ, ಹೊಸ ಶಿಕ್ಷಣ ನೀತಿಯ ರೂಪುರೇಷೆಗಳನ್ನು ಜನರಿಗೆ ತಪ್ಪದೇ ಮನವರಿಕೆ ಮಾಡಿಕೊಡಬೇಕು ಎಂದು ಅನುಷ್ಠಾನ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಮುಖ್ಯಶಿಕ್ಷಕ ಜಿ.ಕೆ.ಶ್ರೀನಿವಾಸ, ಶಿಕ್ಷಣ ಸಂಯೋಜಕರಾದ ಲಿಂಗರಾಜು, ರಾಧಾ, ದಾದಾಪೀರ್, ಬಿಆರ್ಪಿ ಮಲ್ಲಿಕಾರ್ಜುನ, ಪ್ರಸನ್ನ, ಇಸಿಒ ಮಾರುತಿ ಭಂಡಾರಿ ಸಂವಾದದಲ್ಲಿ ಪಾಲ್ಗೊಂಡಿದ್ದರು.</p>.<p>ಶಿಕ್ಷಕ ಈರಸ್ವಾಮಿ, ಎಸ್.ವಿಷ್ಣುವರ್ಧನ, ಬೊಮ್ಮಲಿಂಗಪ್ಪ, ಎಲ್.ರುದ್ರಮುನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ: </strong>ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ಶಿಕ್ಷಣ ನೀತಿ ಸಮಾಜದ ಬದಲಾವಣೆಗೆ ಪೂರಕವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ ಅಭಿಪ್ರಾಯಪಟ್ಟರು.</p>.<p>ನಗರದ ಆದರ್ಶ ವಿದ್ಯಾಲಯದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ಮತ್ತು ಶಿಕ್ಷಣ ಇಲಾಖೆಯ ಅನುಷ್ಠಾನಾಧಿಕಾರಿಗಳಿಂದ ಆಯೋಜಿಸಿದ್ದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಮಕ್ಕಳ ಓದಿಗೆ ಪೂರಕವಾದ ಭಾರತೀಯ ಪರಂಪರೆ, ಸಂಸ್ಕೃತಿ ಮತ್ತು ವೈಜ್ಞಾನಿಕ ಅಂಶಗಳು ಹೊಸ ನೀತಿಯಲ್ಲಿ ನಿರೂಪಿತವಾಗಿವೆ. ಆದ್ದರಿಂದ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.</p>.<p>ಶಿಕ್ಷಣ ಇಲಾಖೆ ಕ್ಷೇತ್ರ ಸಮನ್ವಯಾಧಿಕಾರಿ ಮಂಜಣ್ಣ, ಹೊಸ ಶಿಕ್ಷಣ ನೀತಿಯ ರೂಪುರೇಷೆಗಳನ್ನು ಜನರಿಗೆ ತಪ್ಪದೇ ಮನವರಿಕೆ ಮಾಡಿಕೊಡಬೇಕು ಎಂದು ಅನುಷ್ಠಾನ ಅಧಿಕಾರಿಗಳಿಗೆ ಸಲಹೆ ನೀಡಿದರು.</p>.<p>ಮುಖ್ಯಶಿಕ್ಷಕ ಜಿ.ಕೆ.ಶ್ರೀನಿವಾಸ, ಶಿಕ್ಷಣ ಸಂಯೋಜಕರಾದ ಲಿಂಗರಾಜು, ರಾಧಾ, ದಾದಾಪೀರ್, ಬಿಆರ್ಪಿ ಮಲ್ಲಿಕಾರ್ಜುನ, ಪ್ರಸನ್ನ, ಇಸಿಒ ಮಾರುತಿ ಭಂಡಾರಿ ಸಂವಾದದಲ್ಲಿ ಪಾಲ್ಗೊಂಡಿದ್ದರು.</p>.<p>ಶಿಕ್ಷಕ ಈರಸ್ವಾಮಿ, ಎಸ್.ವಿಷ್ಣುವರ್ಧನ, ಬೊಮ್ಮಲಿಂಗಪ್ಪ, ಎಲ್.ರುದ್ರಮುನಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>