ಪ್ರತಿ ವರ್ಷ ಮೆಕ್ಕೆಜೋಳ ಬಿತ್ತನೆ ಮಾಡಿದ ನಂತರ ಕಾಡು ಹಂದಿಗಳ ಕಾಟ ಶುರುವಾಗುತ್ತಿತ್ತು. ಬಿತ್ತನೆ ಮಾಡಿದ ದಿನದಿಂದ ಹತ್ತು ದಿನಗಳವರೆಗೆ ಹಂದಿಗಳ ದಾಳಿಗೆ ತುತ್ತಾಗದಂತೆ ರಾತ್ರಿಯೆಲ್ಲ ಕಾವಲು ಕಾಯಬೇಕಿತ್ತು. ಆದರೆ, ಇಲ್ಲಿನ ಗುಡ್ಡಗಳಲ್ಲಿ ಚಿರತೆಗಳು ಇರುವುದರಿಂದ ಪ್ರಸ್ತುತ ವರ್ಷ ಹಂದಿಗಳ ಕಾಟ ಕಡಿಮೆ ಆಗಿದೆ. ಹಾಗಾಗಿ ರಾತ್ರಿ ಕಾವಲು ಕಾಯುವುದನ್ನು ಕೆಲ ರೈತರು ಕೈ ಬಿಟ್ಟಿದ್ದರು.
ಆದರೆ, ಚಿರತೆಗಳ ಇರುವಿಕೆಯಿಂದ ಹೊಲಗಳಿಗೆ ತಿರುಗಾಡಲು ಭಯಪಡುವಂತಾಗಿದೆ’ ಎಂದು ಸ್ಥಳೀಯರು ತಿಳಿಸಿದ್ದಾರೆ.