<p><strong>ಮೊಳಕಾಲ್ಮುರು</strong>: ತಾಲ್ಲೂಕಿನ ನಾಗಸಮುದ್ರದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ವಾಲ್ಮೀಕಿ ಪ್ರತಿಮೆಯನ್ನು ಶುಕ್ರವಾರ ಲೋಕಾರ್ಪಣೆ ಮಾಡಲಾಯಿತು.</p>.<p>ಸ್ಥಳೀಯ ಮದಕರಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಈ ಪ್ರತಿಮೆಯನ್ನು ಸ್ಥಾಪಿಸಿದೆ. ಲೋಕಾರ್ಪಣೆ ಅಂಗವಾಗಿ ಶುಕ್ರವಾರ ಮುಂಜಾನೆ 4 ಗಂಟೆಗೆ ಗಂಗಾಪೂಜೆ, ಗಂಗಾಪ್ರವೇಶ ನಡೆಯಿತು. ನಂತರ ನವಗ್ರಹ, ವಸ್ತುಗಣ ಹೋಮ, ನವಗ್ರಹ ಹೋಮ, ವಿಗ್ರಹದ ಪೀಠ ಸ್ಥಾಪನೆ, ಮೂರ್ತಿ ಮೆರವಣಿಗೆ ನಂತರ ವಿಗ್ರಹ ಪ್ರತಿಷ್ಠಾಪಿಸಲಾಯಿತು.</p>.<p>ಈ ಭಾಗದಲ್ಲಿ ನಾಯಕ ಸಮಾಜ ಹೆಚ್ಚಿನ ಸಂಖ್ಯೆಯಲ್ಲಿದೆ. ಸಮಾಜಕ್ಕೆ ಜನಾಂಗದ ಕೊಡುಗೆ ಅಪಾರವಿದ್ದು, ಇಂದಿನ ಪೀಳಿಗೆಗೆ ವಾಲ್ಮೀಕಿ ಮಾದರಿಯಾಗಬೇಕು ಎಂಬ ನಿಟ್ಟಿನಲ್ಲಿ ಗ್ರಾಮದಲ್ಲಿ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಮದಕರಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಎನ್. ಮಾರನಾಯಕ ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಡಾ.ಬಿ. ಯೋಗೇಶ್ ಬಾಬು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಡಿ. ಮಂಜುನಾಥ್, ಎಂ.ಡಿ. ಚನ್ನಾರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ನಾಯಕ ಜನಾಂಗದ ಮುಖಂಡರಾದ ಗೋವಿಂದಪ್ಪ, ಅಡವಿ ಮಾರಯ್ಯ, ಬಿ. ವಿಜಯ್, ಸಂಸ್ಥೆ ಉಪಾಧ್ಯಕ್ಷ ಬೊಮ್ಮಣ್ಣ, ಕಾರ್ಯದರ್ಶಿ ರಮೇಶ್, ಓಬಳೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ತಾಲ್ಲೂಕಿನ ನಾಗಸಮುದ್ರದಲ್ಲಿ ನೂತನವಾಗಿ ಪ್ರತಿಷ್ಠಾಪಿಸಿರುವ ವಾಲ್ಮೀಕಿ ಪ್ರತಿಮೆಯನ್ನು ಶುಕ್ರವಾರ ಲೋಕಾರ್ಪಣೆ ಮಾಡಲಾಯಿತು.</p>.<p>ಸ್ಥಳೀಯ ಮದಕರಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಈ ಪ್ರತಿಮೆಯನ್ನು ಸ್ಥಾಪಿಸಿದೆ. ಲೋಕಾರ್ಪಣೆ ಅಂಗವಾಗಿ ಶುಕ್ರವಾರ ಮುಂಜಾನೆ 4 ಗಂಟೆಗೆ ಗಂಗಾಪೂಜೆ, ಗಂಗಾಪ್ರವೇಶ ನಡೆಯಿತು. ನಂತರ ನವಗ್ರಹ, ವಸ್ತುಗಣ ಹೋಮ, ನವಗ್ರಹ ಹೋಮ, ವಿಗ್ರಹದ ಪೀಠ ಸ್ಥಾಪನೆ, ಮೂರ್ತಿ ಮೆರವಣಿಗೆ ನಂತರ ವಿಗ್ರಹ ಪ್ರತಿಷ್ಠಾಪಿಸಲಾಯಿತು.</p>.<p>ಈ ಭಾಗದಲ್ಲಿ ನಾಯಕ ಸಮಾಜ ಹೆಚ್ಚಿನ ಸಂಖ್ಯೆಯಲ್ಲಿದೆ. ಸಮಾಜಕ್ಕೆ ಜನಾಂಗದ ಕೊಡುಗೆ ಅಪಾರವಿದ್ದು, ಇಂದಿನ ಪೀಳಿಗೆಗೆ ವಾಲ್ಮೀಕಿ ಮಾದರಿಯಾಗಬೇಕು ಎಂಬ ನಿಟ್ಟಿನಲ್ಲಿ ಗ್ರಾಮದಲ್ಲಿ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಮದಕರಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಅಧ್ಯಕ್ಷ ಎನ್. ಮಾರನಾಯಕ ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಡಾ.ಬಿ. ಯೋಗೇಶ್ ಬಾಬು, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಡಿ. ಮಂಜುನಾಥ್, ಎಂ.ಡಿ. ಚನ್ನಾರೆಡ್ಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ, ನಾಯಕ ಜನಾಂಗದ ಮುಖಂಡರಾದ ಗೋವಿಂದಪ್ಪ, ಅಡವಿ ಮಾರಯ್ಯ, ಬಿ. ವಿಜಯ್, ಸಂಸ್ಥೆ ಉಪಾಧ್ಯಕ್ಷ ಬೊಮ್ಮಣ್ಣ, ಕಾರ್ಯದರ್ಶಿ ರಮೇಶ್, ಓಬಳೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>