ರಾಜು ಅವರು ಹೊಳಲ್ಕೆರೆ ತಾಲ್ಲೂಕಿನ ಬಂಜಗೊಂಡನಹಳ್ಳಿಯಲ್ಲಿ ಲಕ್ಷ್ಮೀನರಸಿಂಹ ಬಾರ್ ಆ್ಯಂಡ್ ರೆಸ್ಟೋರಂಟ್ ನಡೆಸುತ್ತಿದ್ದಾರೆ. ಶಿವಹರಳಯ್ಯ ತಪಾಸಣೆಯ ನೆಪದಲ್ಲಿ ಇಲ್ಲಿಗೆ ಆಗಾಗ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದರು. ಲೆಕ್ಕಪುಸ್ತಕ ಹಾಗೂ ದಾಸ್ತಾನು ಸರಿಯಾಗಿ ನಿರ್ವಹಣೆ ಮಾಡುತ್ತಿಲ್ಲವೆಂದು ಪರವಾನಗಿ ರದ್ದುಪಡಿಸುವ ಬೆದರಿಕೆ ಹಾಕುತ್ತಿದ್ದರು ಎಂದು ಎಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.