ಬೀದಿ ದೀಪ ನಿರ್ವಹಣೆಯ ಗುತ್ತಿಗೆ ಪಡೆದಿರುವವರನ್ನು ಕರೆಯಿಸಿ ಎಚ್ಚರಿಕೆ ನೀಡುವಂತೆ ಪೌರಾಯುಕ್ತರಿಗೆ ಹಲವು ಬಾರಿ ಮೌಖಿಕವಾಗಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕರ್ತವ್ಯದಲ್ಲಿ ತೋರಿಸುತ್ತಿರುವ ನಿರ್ಲಕ್ಷ್ಯದಿಂದ ಚುನಾಯಿತ ಜನಪ್ರತಿನಿಧಿಗಳು ಸಾರ್ವಜನಿಕರಿಂದ ಟೀಕೆಗಳನ್ನು ಎದುರಿಸಬೇಕಾಗಿದೆ. ಗುತ್ತಿಗೆದಾರರ ವಿರುದ್ಧ ಹಲವು ಬಾರಿ ದೂರು ನೀಡಿದ್ದರೂ, ಕ್ರಮ ಕೈಗೊಳ್ಳದ ನಗರಸಭೆ ಅಧಿಕಾರಿಗಳು ಗುತ್ತಿಗೆದಾರನೊಂದಿಗೆ ಶಾಮೀಲಾಗಿ ಪ್ರತಿ ತಿಂಗಳು ಅವರಿಗೆ ಬಿಲ್ ಪಾವತಿಸುತ್ತಿದ್ದಾರೆ ಎಂದು ಅವರು ದೂರಿದರು.