‘ಎಸ್ಸಿ, ಎಸ್ಟಿ ಸಮುದಾಯದ ಜನಸಂಖ್ಯೆ ಆಧಾರದ ಮೇಲೆ ನಾಗಮೋಹನ್ ದಾಸ್ ವರದಿ ಸಿದ್ಧಗೊಳಿಸಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಯಾವುದೇ ಕಾರಣ ನೀಡದೆ ಶಿಫಾರಸುಗಳನ್ನು ಜಾರಿಗೊಳಿಸಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಬೇಕಿದೆ’ ಎಂದು ಆಗ್ರಹಿಸಿದರು. ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಗಿರೀಶ್ ಓಬಯ್ಯನಹಟ್ಟಿ, ಜಿಲ್ಲಾ ಉಸ್ತುವಾರಿ ಡಾ.ಅಶೋಕ್ ಚಕ್ರವರ್ತಿ, ರಾಜ್ಯ ಕಾರ್ಯದರ್ಶಿ ಪ್ರಕಾಶ್, ವಾಲ್ಮಿಕಿ ಸಮಾಜದ ಜಿಲ್ಲಾಧ್ಯಕ್ಷ ಕೃಷ್ಣಮೂರ್ತಿ, ಮುಖಂಡರಾದ ಶ್ರೀನಿವಾಸ್, ಬಿ.ಕಾಂತ್ ರಾಜ್, ಯಶೋಧ, ಡಿಎಸ್ಎಸ್ ಮುಖಂಡ ಟಿ.ಡಿ.ರಾಜಗಿರಿ, ಕೊರಚ ಸಮುದಾಯದ ಮುಖಂಡ ಈ.ಶಿವಪ್ಪ ಇದ್ದರು.