ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉನ್ನತ ತನಿಖೆಗೆ ಎಸ್‌ಡಿಪಿಐ ಆಗ್ರಹ

Last Updated 6 ಜುಲೈ 2022, 4:30 IST
ಅಕ್ಷರ ಗಾತ್ರ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ನಡೆದ ಕೊಲೆ ಯತ್ನ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಾಳೆಕಾಯಿ ಶ್ರೀನಿವಾಸ್‌ ಒತ್ತಾಯಿಸಿದರು.

ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೇಲೆ ದಾಳಿಗಳು ಹೆಚ್ಚಾಗಿವೆ. ಜಾತಿ, ಧರ್ಮದ ಕಾರಣಕ್ಕಾಗಿ ಸಮೀವುಲ್ಲಾ ಎಂಬಾತನ ಮೇಲೆ ನೂತನ್‌ ಎಂಬಾತ ಕೊಲೆ ಮಾಡಲು ಯತ್ನಿಸಿದ್ದಾನೆ. ಈ ಕೃತ್ಯ ಪೂರ್ವ ನಿಯೋಜಿತವಾಗಿದೆ’ ಎಂದರು.

ಮಸ್ಕಲ್ ಗ್ರಾಮದ ಸಮೀಪದ ಮಳಿಯಾನ ಕಾಲೊನಿಯಲ್ಲಿ ಕ್ರೈಸ್ತ ಸಮುದಾಯದ ಮಹಿಳೆಯರಿಗೆ ಜೀವ ಬೆದರಿಕೆಯೊಡ್ಡಿ ಬೈಬಲ್‌ ಅನ್ನು ಬಹಿರಂಗವಾಗಿ ಸುಟ್ಟು ಹಾಕಲಾಗಿದೆ. ಇದರ ಹಿಂದೆ ಕೇಸರೀಕರಣದ ಕೈವಾಡವಿದೆ. ಈ ಪ್ರಕರಣಗಳ ಬಗ್ಗೆ ಸೂಕ್ತ ಕ್ರಮ ವಹಿಸಿ ಗ್ರಾಮದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದು ಆಗ್ರಹಿಸಿದರು. ಎಸ್‌ಡಿಪಿಐ ಉಪಾಧ್ಯಕ್ಷ ಕಾಮ್ರಾನ್‌ ಅಲಿ, ಕಾರ್ಯದರ್ಶಿ ಸೈಯದ್‌ ಸಾದತ್‌, ತಾಲ್ಲೂಕು ಘಟಕದ ಅಧ್ಯಕ್ಷ ಜಾಕೀರ್‌ ಹುಸೇನ್‌, ಹಿರಿಯೂರು ತಾಲ್ಲೂಕು ಘಟಕದ ಅಧ್ಯಕ್ಷ ಖಾಲಿದ್‌, ಉಪಾಧ್ಯಕ್ಷ ಮುಜಾಹಿದ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT