<p><strong>ಮೊಳಕಾಲ್ಮುರು:</strong> ಮಳೆ ಕೈ ಕೊಟ್ಟಿದ್ದರಿಂದ ಬಿತ್ತನೆ ಕೈಗೊಳ್ಳಲು ಸಾಧ್ಯವಾಗದೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಮೊಳಕಾಲ್ಮುರು ಮತ್ತು ಚಳ್ಳಕೆರೆ ತಾಲ್ಲೂಕುಗಳನ್ನು ಬರಪೀಡಿತ ಎಂದು ಕೂಡಲೇ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ತಾಲ್ಲೂಕು ಆಡಳಿತ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕು ಸಂಪೂರ್ಣ ಮಳೆಯಾಶ್ರಿತವಾಗಿದ್ದು, ಮುಂಗಾರು ಹಂಗಾಮಿನಲ್ಲಿ ಒಂದು ಬೆಳೆಯನ್ನು ಮಾತ್ರ ಇಲ್ಲಿ ಬೆಳೆಯಲಾಗುತ್ತಿದೆ. ಈ ವರ್ಷ ಆಗಸ್ಟ್ ಬಂದರೂ ಹದ ಮಳೆಯಾಗದ ಕಾರಣ ಬಿತ್ತನೆಯಾಗಿಲ್ಲ. ರೈತರು ತಲೆ ಮೇಲೆ ಕೈ ಹೊತ್ತು ಕೂತಿದ್ದು, ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವ ಮೂಲಕ ನೆರವಿಗೆ ಬರಬೇಕು ಎಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮನವಿ ಮಾಡಿದರು.</p>.<p>ಸರ್ಕಾರ ಸಮೀಕ್ಷೆ ನಡೆಸಿ ನಷ್ಟ ಪರಿಹಾರ ನೀಡಬೇಕು. ದೇವಸಮುದ್ರ ಹೋಬಳಿಯಲ್ಲಿ ಬಿತ್ತನೆ ಮಾಡಿದ್ದ ಹತ್ತಿಯು ಬೆಂಕಿರೋಗಕ್ಕೆ ತುತ್ತಾಗಿದ್ದು, ಪ್ರತಿ ಎಕರೆಗೆ ₹ 40,000ಕ್ಕೂ ಹೆಚ್ಚು ಖರ್ಚು ಮಾಡಿರುವ ರೈತರು ದಿಕ್ಕು ತೋಚದಂತಾಗಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ ಬೀಜ ವಿತರಿಸಿರುವ ಕಂಪನಿಗಳ ವಿರುದ್ಧ ಕ್ರಮದ ಜತೆಗೆ ಪರಿಹಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಮಂಜುನಾಥ್, ಮುಖಂಡರಾದ ಟಿ. ಚಂದ್ರಣ್ಣ, ಎಚ್.ವಿ. ವೀರಯ್ಯ, ಮೇಸ್ತ್ರಿ ಪಾಪಯ್ಯ, ದಾನಸೂರನಾಯಕ, ದೊಡ್ಡಪೆನ್ನಯ್ಯ, ಹೇಮಣ್ಣ, ಭೀಮಣ್ಣ, ಬಸಣ್ಣ, ನಾಗೇಶ್, ನಾಗರಾಜಪ್ಪ, ಗುರಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ಮಳೆ ಕೈ ಕೊಟ್ಟಿದ್ದರಿಂದ ಬಿತ್ತನೆ ಕೈಗೊಳ್ಳಲು ಸಾಧ್ಯವಾಗದೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಮೊಳಕಾಲ್ಮುರು ಮತ್ತು ಚಳ್ಳಕೆರೆ ತಾಲ್ಲೂಕುಗಳನ್ನು ಬರಪೀಡಿತ ಎಂದು ಕೂಡಲೇ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘದ ಕಾರ್ಯಕರ್ತರು ತಾಲ್ಲೂಕು ಆಡಳಿತ ಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ತಾಲ್ಲೂಕು ಸಂಪೂರ್ಣ ಮಳೆಯಾಶ್ರಿತವಾಗಿದ್ದು, ಮುಂಗಾರು ಹಂಗಾಮಿನಲ್ಲಿ ಒಂದು ಬೆಳೆಯನ್ನು ಮಾತ್ರ ಇಲ್ಲಿ ಬೆಳೆಯಲಾಗುತ್ತಿದೆ. ಈ ವರ್ಷ ಆಗಸ್ಟ್ ಬಂದರೂ ಹದ ಮಳೆಯಾಗದ ಕಾರಣ ಬಿತ್ತನೆಯಾಗಿಲ್ಲ. ರೈತರು ತಲೆ ಮೇಲೆ ಕೈ ಹೊತ್ತು ಕೂತಿದ್ದು, ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವ ಮೂಲಕ ನೆರವಿಗೆ ಬರಬೇಕು ಎಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮನವಿ ಮಾಡಿದರು.</p>.<p>ಸರ್ಕಾರ ಸಮೀಕ್ಷೆ ನಡೆಸಿ ನಷ್ಟ ಪರಿಹಾರ ನೀಡಬೇಕು. ದೇವಸಮುದ್ರ ಹೋಬಳಿಯಲ್ಲಿ ಬಿತ್ತನೆ ಮಾಡಿದ್ದ ಹತ್ತಿಯು ಬೆಂಕಿರೋಗಕ್ಕೆ ತುತ್ತಾಗಿದ್ದು, ಪ್ರತಿ ಎಕರೆಗೆ ₹ 40,000ಕ್ಕೂ ಹೆಚ್ಚು ಖರ್ಚು ಮಾಡಿರುವ ರೈತರು ದಿಕ್ಕು ತೋಚದಂತಾಗಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನಹರಿಸಿ ಬೀಜ ವಿತರಿಸಿರುವ ಕಂಪನಿಗಳ ವಿರುದ್ಧ ಕ್ರಮದ ಜತೆಗೆ ಪರಿಹಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎಸ್. ಮಂಜುನಾಥ್, ಮುಖಂಡರಾದ ಟಿ. ಚಂದ್ರಣ್ಣ, ಎಚ್.ವಿ. ವೀರಯ್ಯ, ಮೇಸ್ತ್ರಿ ಪಾಪಯ್ಯ, ದಾನಸೂರನಾಯಕ, ದೊಡ್ಡಪೆನ್ನಯ್ಯ, ಹೇಮಣ್ಣ, ಭೀಮಣ್ಣ, ಬಸಣ್ಣ, ನಾಗೇಶ್, ನಾಗರಾಜಪ್ಪ, ಗುರಪ್ಪ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>