ಸರ್ಕಾರ ಅನುದಾನ ಮೀಸಲಿಟ್ಟು ಹೊರಡಿಸಿದ ಆದೇಶದ ಪ್ರಕಾರ ಮನೆ ಖರೀದಿಸಲು ಅವಕಾಶ ಇರಲಿಲ್ಲ. ಆದೇಶವನ್ನು ಮರು ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಕಚೇರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆದಿತ್ತು. ಮನೆಯ ಮಾರುಕಟ್ಟೆ ಮೌಲ್ಯವನ್ನು ನಿಗದಿಪಡಿಸಿ ಕೋರಿಕೆ ಸಲ್ಲಿಸಲಾಗಿತ್ತು. ವಿಧಾನಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿಅವರೂ ಅನುದಾನ ಬಿಡುಗಡೆಗೆ ಸರ್ಕಾರವನ್ನುಕೋರಿಕೊಂಡಿದ್ದರು.