ಚಿತ್ರದುರ್ಗ: ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಹಿರಿಯೂರಿನ ಎಂಟು ಜನರು ಪಾಲ್ಗೊಂಡಿದ್ದು ಬೆಳಕಿಗೆ ಬಂದಿದ್ದು, ಎಲ್ಲರನ್ನೂ ಪತ್ತೆ ಮಾಡಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಇವರ ಗಂಟಲು ದ್ರವ ಮತ್ತು ರಕ್ತದ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಕೊರೊನಾ ಸೋಂಕು ಹರಡುತ್ತಿದ್ದ ಹಿನ್ನೆಲೆಯಲ್ಲಿ ಮಾರ್ಚ್ 21ರಿಂದಲೇ ಮನೆಯಲ್ಲಿ ಪ್ರತ್ಯೇಕವಾಗಿ ಇದ್ದರು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಫಾಲಕ್ಷ ಮಾಹಿತಿ ನೀಡಿದ್ದಾರೆ.
ಹಿರಿಯೂರಿನ ಮಸೀದಿಯಲ್ಲಿ ಆಶ್ರಯ ಪಡೆದಿದ್ದ ಹೊರ ರಾಜ್ಯದ ಇತರ 12 ಜನರನ್ನು ತಾಲ್ಲೂಕು ಆಡಳಿತ ಪತ್ತೆ ಮಾಡಿದೆ. ಸರ್ವಜನಿಕರೊಬ್ಬರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆತಂದು ತಪಾಸಣೆ ನಡೆಸಿದ್ದಾರೆ.