‘ದಾವಣಗೆರೆ ಸಮೀಪ ಕೈಗಾರಿಕಾ ಕಾರಿಡಾರ್ ಉದ್ದೇಶಕ್ಕಾಗಿ ಫಲವತ್ತಾದ 1,156 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕೆಐಎಡಿಬಿ ಮುಂದಾಗಿದೆ. ರೈತರು ಈ ಭೂಮಿಯಲ್ಲಿ ಅಡಿಕೆ, ತೆಂಗು, ಮಾವು, ಸಂಬಾರು ಪದಾರ್ಥಗಳೂ ಸೇರಿದಂತೆ ಇತರೆ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಸ್ವಾಧೀನ ವಿರೋಧಿಸಿ ಮೆಳ್ಳೆಕಟ್ಟೆ, ಅಣಜಿ, ಲಿಂಗಾಪುರ ಮುಂತಾದ ಗ್ರಾಮಗಳ ರೈತರು ಮಠದ ನ್ಯಾಯಪೀಠದಲ್ಲಿ ಮನವಿ ಸಲ್ಲಿಸಿದ್ದಾರೆ’ ಎಂದು ಶ್ರೀಗಳು ಸಚಿವರಿಗೆ ಹೇಳಿದರು.