ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಳ್ಳಕೆರೆ| ಚೆಕ್‍ಪೋಸ್ಟ್‌ಗಳಲ್ಲಿ ಕಟೆಚ್ಚರ ವಹಿಸಲು ಸೂಚನೆ: ದಿವ್ಯಪ್ರಭು

Last Updated 2 ಏಪ್ರಿಲ್ 2023, 5:55 IST
ಅಕ್ಷರ ಗಾತ್ರ

ಚಳ್ಳಕೆರೆ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಚೆಕ್‌ಪೋಸ್ಟ್‌ಗಳಲ್ಲಿ ಬಿಗಿ ಭದ್ರತೆಯೊಂದಿಗೆ ಅಕ್ರಮಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಎಸ್‍ಎಸ್‍ಟಿ ತಂಡದ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ನಗರ ಹಾಗೂ ಗ್ರಾಮೀಣ ಪ್ರದೇಶದ ಚೆಕ್‍ಪೋಸ್ಟ್‌ಗಳಿಗೆ ಭೇಟಿ ಪರಿಶೀಲನೆ ನಡೆಸಿದರು.

ಶಿಸ್ತು, ಸಮಯ ಪಾಲನೆಯ ಜತೆಗೆ ಚೆಕ್‍ಪೋಸ್ಟ್‌ಗಳಲ್ಲಿ ದಿನದ 24 ಗಂಟೆ ನಿರಂತರ ವಾಹನ ತಪಾಸಣಾ ಕಾರ್ಯ ತಪ್ಪದದೇ ನಡೆಸಬೇಕು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಆಂಧ್ರಪ್ರದೇಶದ ಗಡಿ ಭಾಗದಲ್ಲಿ ಹೊರ ರಾಜ್ಯ ಹಾಗೂ ಜಿಲ್ಲೆಯಿಂದ ಬರುವ ವಾಹನ ತಪಾಸಣಾ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ. ಪರಶುರಾಮ್ ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ, ಚುನಾವಣಾಧಿಕಾರಿ ಬಿ.ಆನಂದ, ಸಹಾಯಕ ಚುನಾವಣಾಧಿಕಾರಿ ರೆಹಾನ್‍ ಪಾಷ, ಶ್ರೀಧರ್, ಪ್ರಕಾಶ್, ಎಸ್‍ಎಸ್‍ಟಿ ಅಧಿಕಾರಿ ಆಂಜನಪ್ಪ, ಪಿಎಸ್‍ಐ ಸತೀಶ್‍ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT