ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾರ್ವಜನಿಕರ ಸ್ವಾಸ್ಥ್ಯ ಹಾಗೂ ನಗರ ನೈರ್ಮಲ್ಯ ಕಾಪಾಡುವುದು ಅಧಿಕಾರಿಗಳ ಕೆಲಸ. ಭೂಮಿ ಅಳತೆಯ ಸರ್ವೆ ದಾಖಲೆಯಲ್ಲಿ ರಾಜಕಾಲುವೆ ಗುರುತು ಅಳಿಸಿ ಹೋಗಿರುವ ಕಾರಣ ಜಾಗವನ್ನು ಒತ್ತುವರಿ ಮಾಡಿಕೊಂಡ ಮಾಲೀಕರು, ರಾಜಕಾಲುವೆ ನಿರ್ಮಾಣಕ್ಕೆ ಅಡ್ಡಿಪಡಿಸುತ್ತಿದ್ದಾರೆ.ಮಲಿನಗೊಂಡು ರಸ್ತೆ ಬದಿಯಲ್ಲಿ ಸಂಗ್ರಹಗೊಂಡಿದ್ದು, ಹಂದಿ ಹಾಗೂ ಸೊಳ್ಳೆಗಳ ಕಾಟವೂ ಹೆಚ್ಚಿದೆ. ಸೂಜಿಮಲ್ಲೇಶ್ವರನಗರ, ಕಾಟಪ್ಪನಹಟ್ಟಿ, ಚಿತ್ರಯ್ಯನಹಟ್ಟಿ ಹಾಗೂ ಹಳೆಟೌನ್ನಲ್ಲಿ ವಿಷಮಶೀತ ಜ್ವರ ಹಾಗೂ ಮಲೇರಿಯಾ ಪ್ರಕರಣಗಳು ಕಂಡು ಬಂದಿವೆ’ ಎಂದು ಹೇಳಿದರು.