18 ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಹಲವು ಬಾರಿ ಸರ್ಕಾರದ ಭಾಗವಾಗಿದ್ದರು. ಆದರೆ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲರಾದರು. ಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಅನುದಾನಿತ ಶಾಲಾ ಶಿಕ್ಷಕರು ವಿವಿಧ ಭೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ 143 ದಿನಗಳವರೆಗೆ ಚಳವಳಿ ನಡೆಸಿದರು. ಈ ವೇಳೆ ಮೂವರು ಶಿಕ್ಷಕರು ಮೃತಪಟ್ಟರು. ಆದರೆ, ಶಿಕ್ಷಕರ ಕ್ಷೇತ್ರದ ಪ್ರತಿನಿಧಿ ಎನಿಸಿಕೊಂಡವರು ಶಿಕ್ಷಕರ ಸಮಸ್ಯೆಗಳನ್ನು ಆಲಿಸುವ ಸೌಜನ್ಯ ತೋರಲಿಲ್ಲ. ಇಂತಹವರು ಮತ್ತೊಮ್ಮೆ ಶಿಕ್ಷಕರ ಬಳಿ ಬಂದು ಮತ ಕೇಳುತ್ತಿರುವುದು ವಿಪರ್ಯಾಸ. ಇದನ್ನು ಶಿಕ್ಷಕರು ಗಮನಿಸುತ್ತಿದ್ದು, ಬಿಜೆಪಿ ಅಭ್ಯರ್ಥಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.