‘ಹೋಬಳಿಯಾದ್ಯಂತ ಈರುಳ್ಳಿ ದರ ಕುಸಿದಿರುವುದರಿಂದ ಖರೀದಿದಾರರು ಈರುಳ್ಳಿ ಖರೀದಿಸಲು ಮುಂದೆ ಬರುತ್ತಿಲ್ಲ. ಈ ಬಾರಿ ಉತ್ತಮ ದರ ಸಿಗಬಹುದೆಂದು ಬಿತ್ತನೆ ಮಾಡಿದ್ದೆವು. ಆದರೆ ಬೆಳೆ ಬೆಳೆಯಲು ಮಾಡಿದ ಖರ್ಚು ಸಹ ಬರುತ್ತಿಲ್ಲ. ಕಾರಣ ಬೇಸತ್ತು ನಾವೇ ವಾಹನ ಮಾಡಿಕೊಂಡು ಬಂದಷ್ಟು ಬರಲಿ ಎಂದು ಬೀದಿ ಬೀದಿ ತಿರುಗಿ ಮಾರಾಟ ಮಾಡುತ್ತಿದ್ದೇವೆ. ಒಂದು ಚೀಲಕ್ಕೆ ₹ 60ರಿಂದ ₹ 100ರವರೆಗೆ ಮಾರಾಟ ಮಾಡುತ್ತಿದ್ದೇವೆ. ಇಷ್ಟು ಕಡಿಮೆ ಕೊಟ್ಟರೂ ಜನ ಇನ್ನೂ ಚೌಕಾಸಿ ಮಾಡುತ್ತಿದ್ದಾರೆ. ಈರುಳ್ಳಿಗೆ ವೆಚ್ಚ ಮಾಡಿದ ಖರ್ಚು ನೆನೆಸಿಕೊಂಡರೆ ಕಣ್ಣೀರು ಬರುತ್ತದೆ. ಏಕಾದರೂ ಬಿತ್ತಿದೆವೋ ಎನ್ನಿಸುತ್ತದೆ. ಎಷ್ಟು ಸಾಧ್ಯವೋ ಅಷ್ಟನ್ನು ಮಾರಾಟ ಮಾಡಿ ಉಳಿದಿದ್ದನ್ನು ತಿಪ್ಪೆಗೆ ಹಾಕುತ್ತಿದ್ದೇವೆ. ಒಂದಿಷ್ಟು ಜಮೀನಿನಲ್ಲಿಯೇ ಕೊಳೆಯಲು ಬಿಟ್ಟಿದ್ದೇವೆ’ ಎಂದು ಉದಯಕುಮಾರ್ ಬೇಸರಿಸಿದರು.