<p><strong>ಸಿರಿಗೆರೆ</strong>: ಪ್ರಮುಖ ಧಾರ್ಮಿಕ ಸಂಸ್ಥೆಗಳಲ್ಲಿ ಒಂದಾದ ತರಳಬಾಳು ಮಠದಿಂದ 3 ವರ್ಷಗಳ ಕಾಲ ಬಿಎ, ಬಿಕಾಂ ಮತ್ತು ಬಿ.ಎಸ್ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಕರ್ಯಗಳನ್ನು ನೀಡುತ್ತಿದೆ.</p>.<p>ಅದಕ್ಕಾಗಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಮಠದ ಶಿವಕುಮಾರ ಸ್ವಾಮೀಜಿ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಅಕ್ಕಮಹಾದೇವಿ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.</p>.<p>ತರಳಬಾಳು ಸಂಸ್ಥೆಯು ಸಿರಿಗೆರೆಯಲ್ಲಿ ನಡೆಸುತ್ತಿರುವ ಎಂ. ಬಸವಯ್ಯ ವಸತಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪದವಿ ತರಗತಿಗಳಿಗೆ ದಾಖಲಾತಿ ಪಡೆಯಬೇಕು. ಸಾಮಾನ್ಯ ಪದವಿ ಶಿಕ್ಷಣದತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಈ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಕಾಲೇಜು ಪ್ರಾಚಾರ್ಯ ಶಿವಬಸವ ಕುಟಗಿಮಠ ತಿಳಿಸಿದರು.</p>.<p>ಕಾಲೇಜು ದಾವಣಗೆರೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿದ್ದು, ಕಾಲೇಜಿನಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಸುಸಜ್ಜಿತ ಗ್ರಂಥಾಲಯ, ಪ್ರಯೋಗಾಲಯಗಳು, ಕಂಪ್ಯೂಟರ್ ಶಿಕ್ಷಣ ನೀಡುವ ವ್ಯವಸ್ಥೆಯೂ ಕಾಲೇಜಿನಲ್ಲಿದೆ. 1968ರಲ್ಲಿ ಸ್ಥಾಪನೆಯಾದ ಈ ಕಾಲೇಜಿನಲ್ಲಿ ಓದಿರುವ ಸಾವಿರಾರು ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಾಚಾರ್ಯರು ಹೇಳಿದರು.</p>.<p>ಆಸಕ್ತ ಪೋಷಕರು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಾಲೇಜು ಪ್ರಾಚಾರ್ಯರನ್ನು ಸಂಪರ್ಕಿಸಬಹುದು. ಮೊ: 70194 65953, 82173 85439, 83107 31013.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ</strong>: ಪ್ರಮುಖ ಧಾರ್ಮಿಕ ಸಂಸ್ಥೆಗಳಲ್ಲಿ ಒಂದಾದ ತರಳಬಾಳು ಮಠದಿಂದ 3 ವರ್ಷಗಳ ಕಾಲ ಬಿಎ, ಬಿಕಾಂ ಮತ್ತು ಬಿ.ಎಸ್ಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಕರ್ಯಗಳನ್ನು ನೀಡುತ್ತಿದೆ.</p>.<p>ಅದಕ್ಕಾಗಿ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ಮಠದ ಶಿವಕುಮಾರ ಸ್ವಾಮೀಜಿ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಅಕ್ಕಮಹಾದೇವಿ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ವ್ಯವಸ್ಥೆ ಮಾಡಲಾಗಿದೆ.</p>.<p>ತರಳಬಾಳು ಸಂಸ್ಥೆಯು ಸಿರಿಗೆರೆಯಲ್ಲಿ ನಡೆಸುತ್ತಿರುವ ಎಂ. ಬಸವಯ್ಯ ವಸತಿ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪದವಿ ತರಗತಿಗಳಿಗೆ ದಾಖಲಾತಿ ಪಡೆಯಬೇಕು. ಸಾಮಾನ್ಯ ಪದವಿ ಶಿಕ್ಷಣದತ್ತ ವಿದ್ಯಾರ್ಥಿಗಳನ್ನು ಆಕರ್ಷಿಸಲು ಈ ಸೌಲಭ್ಯವನ್ನು ನೀಡಲಾಗುತ್ತಿದೆ ಎಂದು ಕಾಲೇಜು ಪ್ರಾಚಾರ್ಯ ಶಿವಬಸವ ಕುಟಗಿಮಠ ತಿಳಿಸಿದರು.</p>.<p>ಕಾಲೇಜು ದಾವಣಗೆರೆ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿದ್ದು, ಕಾಲೇಜಿನಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ. ಸುಸಜ್ಜಿತ ಗ್ರಂಥಾಲಯ, ಪ್ರಯೋಗಾಲಯಗಳು, ಕಂಪ್ಯೂಟರ್ ಶಿಕ್ಷಣ ನೀಡುವ ವ್ಯವಸ್ಥೆಯೂ ಕಾಲೇಜಿನಲ್ಲಿದೆ. 1968ರಲ್ಲಿ ಸ್ಥಾಪನೆಯಾದ ಈ ಕಾಲೇಜಿನಲ್ಲಿ ಓದಿರುವ ಸಾವಿರಾರು ವಿದ್ಯಾರ್ಥಿಗಳು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಾಚಾರ್ಯರು ಹೇಳಿದರು.</p>.<p>ಆಸಕ್ತ ಪೋಷಕರು, ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಾಲೇಜು ಪ್ರಾಚಾರ್ಯರನ್ನು ಸಂಪರ್ಕಿಸಬಹುದು. ಮೊ: 70194 65953, 82173 85439, 83107 31013.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>