‘ಈ ನಿರ್ಧಾರದಿಂದ ಮತ್ತಿನ್ನೇನು ಅನಾಹುತಕ್ಕೆ ಕಾರಣವಾಗುವುದೋ? ಕುಡಿತದಿಂದ ಹಣ, ಆರೋಗ್ಯ, ನೆಮ್ಮದಿ ನೆಲಕಚ್ಚುವುದಲ್ಲದೆ ಕಳವು, ಸುಲಿಗೆ, ಅಪಘಾತ ಇತರ ಅನಾಹುತಗಳು ಸಾಲು ಸಾಲಾಗಿ ನಡೆಯಬಹುದು. ಈ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಇನ್ನೂ ಸ್ವಾತಂತ್ರ್ಯವಿದೆ. ಕೊರೊನಾ ಸೋಂಕು ಮರೆಯಾಗುವವರೆಗೂ ಸಂಪೂರ್ಣ ಮದ್ಯ ನಿಷೇಧ ಮಾಡಿ ನಂತರ ಸರ್ವೆ ಮೂಲಕ ಮುಂದಿನ ಕ್ರಮ ಜರುಗಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.