‘ತಾಲ್ಲೂಕು ಮರಳು ಸಮಿತಿಯ ನಡಾವಳಿ ಹಾಗೂ ಅಧಿಕಾರಿಗಳ ಜಂಟಿ ತಪಾಸಣಾ ವರದಿಯನ್ನು ಜಿಲ್ಲಾ ಮರಳು ಸಮಿತಿಯಲ್ಲಿ ಚರ್ಚಿಸಬೇಕಿರುವ ಕಾರಣ ಮರಳು ಗಣಿ ಗುತ್ತಿಗೆ ಪ್ರದೇಶಗಳಲ್ಲಿ ಮರಳು ಗಣಿ ಚಟುವಟಿಕೆಯನ್ನು ಮುಂದಿನ ಆದೇಶದವರೆಗೂ ಸ್ಥಗಿತಗೊಳಿಸಿ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆದೇಶಿಸಿದೆ’ ಎಂದು ಶಾಸಕ ಟಿ. ರಘುಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.