ಮೇ 20 ರಿಂದ 3–4 ದಿನಗಳ ಕಾಲ ಚಿತ್ರದುರ್ಗ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಆದರೆ, ಜವನಗೊಂಡನಹಳ್ಳಿ ಭಾಗದಲ್ಲಿ ನಿರೀಕ್ಷೆಯಂತೆ ಮಳೆಯಾಗದ ಕಾರಣ ಈಗಲೂ, ಗ್ರಾಮೀಣ ಭಾಗದ ಜನರು ಟ್ಯಾಂಕರ್ ನೀರಿಗೆ ಕಾಯುವುದು ತಪ್ಪಿಲ್ಲ. ಕುಡಿಯುವ ನೀರಿನ ಸಮಸ್ಯೆ ಅರಿತು ಬೋರನಕಣಿವೆ ಅಣೆಕಟ್ಟೆಯಿಂದ ನೀರು ಬಿಡುಗಡೆಗೆ ಆದೇಶ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.