ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಸ್ವಾಮೀಜಿ, ‘ಒಳಮೀಸಲು ಹಕ್ಕನ್ನು ನೀಡಲು ರಾಜ್ಯಗಳಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಇದಕ್ಕೆ ಸಂವಿಧಾನ ತಿದ್ದುಪಡಿಯ ಅವಶ್ಯಕತೆ ಇಲ್ಲ ಎಂದು ಸುಪ್ರೀಂ ಕೋರ್ಟ್ನ ಐವರು ನ್ಯಾಯಮೂರ್ತಿಗಳ ಪೀಠ ಅಭಿಪ್ರಾಯ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಮೀಸಲು ವಂಚಿತ ಬಹುಸಂಖ್ಯಾತ ಅಸ್ಪೃಶ್ಯ ಸಮುದಾಯಗಳಿಗೆ ತಮ್ಮ ಹಕ್ಕು ಪಡೆಯಲು ಜೀವ ಬಂದಂತಾಗಿದೆ. 2004ರಲ್ಲಿ ಇದೇ ಸುಪ್ರೀಂ ಕೋರ್ಟ್ನಲ್ಲಿ ಆಂಧ್ರಪ್ರದೇಶಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಒಳಮೀಸಲು ಕಲ್ಪಿಸಲು ಸಾಂವಿಧಾನಿಕ ತಿದ್ದುಪಡಿ ಅಗತ್ಯ ಎಂದು ತೀರ್ಪು ಬಂದಿತ್ತು. ಈಗ ಐವರು ನ್ಯಾಯಮೂರ್ತಿಗಳ ಪೀಠದಿಂದ ವ್ಯತಿರಿಕ್ತ ಅಭಿಪ್ರಾಯ ಬಂದಿರುವುದರಿಂದ ಒಳಮೀಸಲಿನ ಮೂರು ದಶಕಗಳ ಹೋರಾಟಕ್ಕೆ ಮರುಜೀವ ಬಂದಂತಾಗಿದೆ’ ಎಂದರು.