‘ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಲೋಕಸಭೆ, ವಿಧಾನಸಭೆ ಟಿಕೆಟ್ ಕೊಡಿಸಿ ಹುಬ್ಬೇರಿಸುವಂತೆ ಮಾಡಿದ್ದು ಮಾದರಿ ಕಾರ್ಯವಾಗಿತ್ತು. ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರಮುಖ ಹುದ್ದೆಗಳು ಸಾಮಾನ್ಯ ಕಾರ್ಯಕರ್ತರಿಗೆ ಲಭಿಸುವಂತೆ ಬಹಳಷ್ಟು ಶ್ರಮಿಸುತ್ತಿದ್ದರು. ಎಷ್ಟೇ ಉನ್ನತ ಸ್ಥಾನಕ್ಕೆ ಹೋಗಿದ್ದರೂ ಸಾಮಾನ್ಯರಂತೆ ಎಲ್ಲರೊಂದಿಗೆ ಬೆರೆಯುತ್ತಿದ್ದರು. ಅವರನ್ನು ಕಳೆದುಕೊಂಡ ಪಕ್ಷ ಹಾಗೂ ನನ್ನಂತ ಕಾರ್ಯಕರ್ತರಿಗೆ ಅಪಾರ ನೋವಾಗಿದೆ’ ಎಂದು ತಿಳಿಸಿದ್ದಾರೆ.