<p><strong>ಸಿರಿಗೆರೆ:</strong> ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 4 ವರ್ಷಗಳ ನಂತರ ಬುಧವಾರ ಸಂಜೆ ತರಳಬಾಳು ಮಠಕ್ಕೆ ಭೇಟಿ ನೀಡಿದರು. </p>.<p>ಅನ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುವ ಮಾರ್ಗಮಧ್ಯೆ ಮಠಕ್ಕೆ ಅವರು ಭೇಟಿ ನೀಡಿದ್ದರು. ಬೃಹನ್ಮಠದ ಆವರಣದಲ್ಲಿನ ಐಕ್ಯಮಂಟಪಕ್ಕೆ ತೆರಳಿದ ಸಾಣೇಹಳ್ಳಿ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.</p>.<p>‘ಸಾಣೇಹಳ್ಳಿಯಲ್ಲಿ ನವೆಂಬರ್ ತಿಂಗಳಿನಲ್ಲಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ. ಅದರ ಸಮಾರೋಪ ಸಮಾರಂಭಕ್ಕೆ ತರಳಬಾಳು ಪೀಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಆಹ್ವಾನಿಸುವ ದೃಷ್ಟಿಯಿಂದ ಸಿರಿಗೆರೆಗೆ ಬಂದಿದ್ದೇವೆ. ಶ್ರೀಗಳು ಅನ್ಯ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿರುವುದಾಗಿ ತಿಳಿಯಿತು’ ಎಂದು ಹೇಳಿದರು.</p>.<p>ಸಿರಿಗೆರೆ ಮತ್ತು ಸುತ್ತಲಿನ ಹಲವು ಭಕ್ತರು ಮಠಕ್ಕೆ ಬಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ:</strong> ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 4 ವರ್ಷಗಳ ನಂತರ ಬುಧವಾರ ಸಂಜೆ ತರಳಬಾಳು ಮಠಕ್ಕೆ ಭೇಟಿ ನೀಡಿದರು. </p>.<p>ಅನ್ಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುವ ಮಾರ್ಗಮಧ್ಯೆ ಮಠಕ್ಕೆ ಅವರು ಭೇಟಿ ನೀಡಿದ್ದರು. ಬೃಹನ್ಮಠದ ಆವರಣದಲ್ಲಿನ ಐಕ್ಯಮಂಟಪಕ್ಕೆ ತೆರಳಿದ ಸಾಣೇಹಳ್ಳಿ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.</p>.<p>‘ಸಾಣೇಹಳ್ಳಿಯಲ್ಲಿ ನವೆಂಬರ್ ತಿಂಗಳಿನಲ್ಲಿ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ. ಅದರ ಸಮಾರೋಪ ಸಮಾರಂಭಕ್ಕೆ ತರಳಬಾಳು ಪೀಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯನ್ನು ಆಹ್ವಾನಿಸುವ ದೃಷ್ಟಿಯಿಂದ ಸಿರಿಗೆರೆಗೆ ಬಂದಿದ್ದೇವೆ. ಶ್ರೀಗಳು ಅನ್ಯ ಕಾರ್ಯನಿಮಿತ್ತ ಬೆಂಗಳೂರಿಗೆ ಹೋಗಿರುವುದಾಗಿ ತಿಳಿಯಿತು’ ಎಂದು ಹೇಳಿದರು.</p>.<p>ಸಿರಿಗೆರೆ ಮತ್ತು ಸುತ್ತಲಿನ ಹಲವು ಭಕ್ತರು ಮಠಕ್ಕೆ ಬಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>