‘ಕೋವಿಡ್ ಕಾರಣ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದೆ. ಹಿಂದೆ ನಿತ್ಯ 30 ಲಕ್ಷ ಪ್ರಯಾಣಿಕರು ನಮ್ಮ ಬಸ್ಗಳಲ್ಲಿ ಸಂಚರಿಸುತ್ತಿದ್ದರು. ಕೋವಿಡ್ ನಂತರ ಈ ಸಂಖ್ಯೆ 10 ಲಕ್ಷಕ್ಕೆ ಇಳಿದಿದೆ. ಈಗ ಸ್ವಲ್ಪ ಚೇತರಿಕೆ ಕಾಣಿಸುತ್ತಿದ್ದು, ಪ್ರಯಾಣಿಕರ ಸಂಖ್ಯೆ 12 ಲಕ್ಷಕ್ಕೆ ಏರಿಕೆಯಾಗಿದೆ. ಮುಂದೆ ಇನ್ನೂ ಸುಧಾರಿಸುವ ವಿಶ್ವಾಸ ಇದೆ. ನಿಗಮವು ಆರ್ಥಿಕ ಸಂಕಷ್ಟದಲ್ಲಿ ಇರುವುದರಿಂದ ಹೊಸ ನೇಮಕಾತಿಗಳನ್ನು ನಿಲ್ಲಿಸಲಾಗಿದೆ. ಇನ್ನು ಆರೇಳು ತಿಂಗಳಲ್ಲಿ ಪರಿಸ್ಥಿತಿ ಸುಧಾರಿಸುವ ವಿಶ್ವಾಸ ಇದ್ದು, ನಂತರ ನೇಮಕಾತಿ ಆರಂಭಿಸಲಾಗುವುದು. ಸಂಸ್ಥೆ ನಷ್ಟದಲ್ಲಿದ್ದರೂ ನೌಕರರಿಗೆ ವೇತನ ನೀಡಲಾಗಿದೆ. ಮತ್ತೆ ಮೂರು ತಿಂಗಳ ವೇತನ ಬಿಡುಗಡೆ ಮಾಡಲು ಪ್ರಸ್ತಾವ ಸಲ್ಲಿಸಲಾಗಿದೆ’ ಎಂದರು.