<p><strong>ಸಿರಿಗೆರೆ (ಚಿತ್ರದುರ್ಗ):</strong> 'ಪೇಸಿಎಂ' ಅಭಿಯಾನ ಕಾಂಗ್ರೆಸ್ ನ ಡರ್ಟಿ ಪಾಲಿಟಿಕ್ಸ್. ನೇರವಾಗಿ ಮಾತನಾಡುವ, ಎದುರಿಸುವ, ದಾಖಲೆ ನೀಡುವ ಬದಲು ಅನ್ಯ ಮಾರ್ಗ ತುಳಿದಿದೆ. ಇದು ಕಾಂಗ್ರೆಸ್ ನೈತಿಕತೆಯ ಅಧಃಪತನದ ಸೂಚಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿರುಗೆರೆಯ ತರಳಬಾಳು ಮಠದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 30ನೇ ಶ್ರದ್ಧಾಂಜಲಿ ಸಮಾರಂಭಕ್ಕೆ ಶನಿವಾರ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 'ಅಭಿಯಾನ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಎಚ್ಚರಿಕೆ ನೀಡಿದರು.</p>.<p>'ಕಾಂಗ್ರೆಸ್ ನಾಯಕರು ಸಂಪೂರ್ಣ ಹತಾಶರಾಗಿದ್ದಾರೆ. ಯಾವುದೇ ವಿಚಾರವನ್ನು ಸರಿಯಾಗಿ ತಿಳಿಯುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವತಯಾರಿ ಇಲ್ಲದೇ ಸದನಕ್ಕೆ ಬರುತ್ತಿದ್ದಾರೆ. ಜನಪರ ಕಾಳಜಿ ಅವರಲ್ಲಿ ಕಾಣುತ್ತಿಲ್ಲ. ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಇದ್ದಾರೆ. ಕರ್ನಾಟಕದಲ್ಲಿ ಇದು ಸಾಧ್ಯವಿಲ್ಲ' ಎಂದರು.</p>.<p>'ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂಬಂಧ ದೆಹಲಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಚರ್ಚೆ ಮಾಡಲಾಗುವುದು. ಚುನಾವಣಾ ಪೂರ್ವ ಸಮೀಕ್ಷೆ ಒಂದೊಂದು ರೀತಿ ಬರುತ್ತಿವೆ. ಜನರ ನಾಡಿ ಮಿಡಿತ ನಮಗೂ ಗೊತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>ಓದಿ...</p>.<p><a href="https://www.prajavani.net/karnataka-news/karnataka-politics-bharat-jodo-yatra-congress-dk-shivakumar-siddaramaiah-974675.html" target="_blank">ಭಾರತ್ ಜೋಡೊ ಯಾತ್ರೆ: ಕಾಂಗ್ರೆಸ್ ಶಾಸಕರ ಸಂಕಟ, ಮೊಗಸಾಲೆಯಲ್ಲಿ ಗೊಣಗಾಟ</a></p>.<p><a href="https://www.prajavani.net/karnataka-news/psi-exam-scam-siddaramaiah-basavaraj-bommai-adgp-amrit-paul-974673.html" target="_blank">ಪಿಎಸ್ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ನೇಮಕ ಮಾಡಿದ್ದೇ ಬೊಮ್ಮಾಯಿ –ಸಿದ್ದರಾಮಯ್ಯ</a></p>.<p><a href="https://www.prajavani.net/karnataka-news/paycm-poster-pastes-siddaramaiah-dk-shivakumar-ranadeep-singh-surjewala-detained-by-police-974512.html" target="_blank">'ಪೇಸಿಎಂ' ಪೋಸ್ಟರ್ ಅಂಟಿಸಿದ ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ</a></p>.<p><a href="https://www.prajavani.net/karnataka-news/karnataka-politics-basavaraj-bommai-siddaramaiah-dk-shivakumar-corruption-congress-bjp-974691.html" target="_blank">ಭ್ರಷ್ಟರೇ ಈಗ ಭ್ರಷ್ಟಾಚಾರದ ವಿರುದ್ಧ ಅಭಿಯಾನ ಮಾಡುತ್ತಿದ್ದಾರೆ: ಸಿಎಂ ಬೊಮ್ಮಾಯಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ (ಚಿತ್ರದುರ್ಗ):</strong> 'ಪೇಸಿಎಂ' ಅಭಿಯಾನ ಕಾಂಗ್ರೆಸ್ ನ ಡರ್ಟಿ ಪಾಲಿಟಿಕ್ಸ್. ನೇರವಾಗಿ ಮಾತನಾಡುವ, ಎದುರಿಸುವ, ದಾಖಲೆ ನೀಡುವ ಬದಲು ಅನ್ಯ ಮಾರ್ಗ ತುಳಿದಿದೆ. ಇದು ಕಾಂಗ್ರೆಸ್ ನೈತಿಕತೆಯ ಅಧಃಪತನದ ಸೂಚಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.</p>.<p>ಸಿರುಗೆರೆಯ ತರಳಬಾಳು ಮಠದ ಲಿಂಗೈಕ್ಯ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ 30ನೇ ಶ್ರದ್ಧಾಂಜಲಿ ಸಮಾರಂಭಕ್ಕೆ ಶನಿವಾರ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. 'ಅಭಿಯಾನ ನಡೆಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಎಚ್ಚರಿಕೆ ನೀಡಿದರು.</p>.<p>'ಕಾಂಗ್ರೆಸ್ ನಾಯಕರು ಸಂಪೂರ್ಣ ಹತಾಶರಾಗಿದ್ದಾರೆ. ಯಾವುದೇ ವಿಚಾರವನ್ನು ಸರಿಯಾಗಿ ತಿಳಿಯುವ ವ್ಯವಧಾನ ಅವರಲ್ಲಿ ಉಳಿದಿಲ್ಲ. ಪೂರ್ವತಯಾರಿ ಇಲ್ಲದೇ ಸದನಕ್ಕೆ ಬರುತ್ತಿದ್ದಾರೆ. ಜನಪರ ಕಾಳಜಿ ಅವರಲ್ಲಿ ಕಾಣುತ್ತಿಲ್ಲ. ಕೆಟ್ಟ ರಾಜಕೀಯ ಮಾಡಿಕೊಂಡು ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಇದ್ದಾರೆ. ಕರ್ನಾಟಕದಲ್ಲಿ ಇದು ಸಾಧ್ಯವಿಲ್ಲ' ಎಂದರು.</p>.<p>'ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಸಂಬಂಧ ದೆಹಲಿಗೆ ಭೇಟಿ ನೀಡಿ ವರಿಷ್ಠರೊಂದಿಗೆ ಚರ್ಚೆ ಮಾಡಲಾಗುವುದು. ಚುನಾವಣಾ ಪೂರ್ವ ಸಮೀಕ್ಷೆ ಒಂದೊಂದು ರೀತಿ ಬರುತ್ತಿವೆ. ಜನರ ನಾಡಿ ಮಿಡಿತ ನಮಗೂ ಗೊತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.</p>.<p>ಓದಿ...</p>.<p><a href="https://www.prajavani.net/karnataka-news/karnataka-politics-bharat-jodo-yatra-congress-dk-shivakumar-siddaramaiah-974675.html" target="_blank">ಭಾರತ್ ಜೋಡೊ ಯಾತ್ರೆ: ಕಾಂಗ್ರೆಸ್ ಶಾಸಕರ ಸಂಕಟ, ಮೊಗಸಾಲೆಯಲ್ಲಿ ಗೊಣಗಾಟ</a></p>.<p><a href="https://www.prajavani.net/karnataka-news/psi-exam-scam-siddaramaiah-basavaraj-bommai-adgp-amrit-paul-974673.html" target="_blank">ಪಿಎಸ್ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ನೇಮಕ ಮಾಡಿದ್ದೇ ಬೊಮ್ಮಾಯಿ –ಸಿದ್ದರಾಮಯ್ಯ</a></p>.<p><a href="https://www.prajavani.net/karnataka-news/paycm-poster-pastes-siddaramaiah-dk-shivakumar-ranadeep-singh-surjewala-detained-by-police-974512.html" target="_blank">'ಪೇಸಿಎಂ' ಪೋಸ್ಟರ್ ಅಂಟಿಸಿದ ಸಿದ್ದರಾಮಯ್ಯ, ಡಿಕೆಶಿ ಪೊಲೀಸ್ ವಶಕ್ಕೆ</a></p>.<p><a href="https://www.prajavani.net/karnataka-news/karnataka-politics-basavaraj-bommai-siddaramaiah-dk-shivakumar-corruption-congress-bjp-974691.html" target="_blank">ಭ್ರಷ್ಟರೇ ಈಗ ಭ್ರಷ್ಟಾಚಾರದ ವಿರುದ್ಧ ಅಭಿಯಾನ ಮಾಡುತ್ತಿದ್ದಾರೆ: ಸಿಎಂ ಬೊಮ್ಮಾಯಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>