ಗವಿರಂಗಾಪುರದ ಬೇಕರಿ ಮಾಲೀಕ ಲೋಕೇಶ್ ಎಂಬುವರಿಗೆ ಇ ಸ್ವತ್ತು ಮಾಡಿಕೊಂಡಲು ₹ 6 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕೇಶ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬಸ್ ನಿಲ್ದಾಣದ ಬಳಿ ಶುಕ್ರವಾರ ಲಂಚದ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.