‘ಕಳೆದ ಭಾನುವಾರ ಹಲವು ಗ್ರಾಮ ಗಳಲ್ಲಿ ಮದುವೆಗಳಲ್ಲಿ ಸಾಕಷ್ಟು ಜನರು ಸೇರಿದ್ದರು. ಅಂತರ ಕಾಪಾಡಿರಲಿಲ್ಲ, ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿರಲಿಲ್ಲ. ಗ್ರಾಮ ಪಂಚಾಯಿತಿಗಳು ಸಹ ಗಮನಹರಿಸುತ್ತಿಲ್ಲ. ರಾಂಪುರ, ಮೊಳಕಾಲ್ಮುರು, ಕೊಂಡ್ಲಹಳ್ಳಿ, ನಾಗಸಮುದ್ರ ಸೇರಿದಂತೆ ದೊಡ್ಡ ಗ್ರಾಮಗಳಲ್ಲಿ ಕಿರಾಣಿ, ಬಟ್ಟೆ, ಆಭರಣ ಅಂಗಡಿಗಳಲ್ಲಿ ಜನದಟ್ಟಣೆ ಕಂಡು ಬರುತ್ತಿದೆ. ಇದು ಸೋಂಕು ಮರು ಆಗಮನದ ಭೀತಿ ಮೂಡಿಸಿದೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ ದೂರಿದರು.