ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿರಿಯೂರು: ದುರುಗುಟ್ಟಿ ನೋಡಿದ ವ್ಯಕ್ತಿಗೆ ಚಾಕು ಇರಿತ, ಗಂಭೀರ ಗಾಯ

Last Updated 3 ಜುಲೈ 2022, 8:26 IST
ಅಕ್ಷರ ಗಾತ್ರ

ಹಿರಿಯೂರು: ದುರುಗುಟ್ಟಿ ನೋಡಿದ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಆಲೂರಿನಲ್ಲಿ ನಡೆದಿದೆ.

ಇರಿತದಿಂದ ಗಾಯಗೊಂಡ ವ್ಯಕ್ತಿ ಸಮೀವುಲ್ಲಾ. ಕೊಲೆ ಯತ್ನ ಆರೋಪದಡಿ ನೂತನ್ ವಿರುದ್ಧ ಪ್ರಕರಣ ದಾಖಲಾಗಿದೆ.

ದುರುಗುಟ್ಟಿ ನೋಡಿದ ಸಮೀವುಲ್ಲಾ ಎಂಬುವರನ್ನು ನೂತನ್‌ ಪ್ರಶ್ನಿಸಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ವಾಗ್ವಾದವಾಗಿದೆ. ಕುಪಿತಗೊಂಡ ನೂತನ್‌, ಸಮೀವುಲ್ಲಾಗೆ ಇರಿದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಂಭೀರವಾಗಿ ಗಾಯಗೊಂಡಿರುವ ಸಮೀವುಲ್ಲಾ ಅವರಿಗೆ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಯ ಎಸ್.ಎಸ್‌. ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಪರುಶುರಾಮ್, ಡಿವೈಎಸ್ಪಿ ರೋಷನ್ ಜಮೀರ್, ಸಿಪಿಐ ಆನಂದ್ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT