<p><strong>ಚಳ್ಳಕೆರೆ:</strong>ತಾಲ್ಲೂಕಿನ ಮೀರಾಸಾಬಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಡಪನಕುಂಟೆ ಗ್ರಾಮದಲ್ಲಿ ಈರುಳ್ಳಿ ಬೆಳೆಗೆ ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿ ಬೆಳೆ ನಾಶಪಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>ರೈತ ನಿಂಗೇಗೌಡ ಕೊಳವೆಬಾವಿಯ ನೀರಿಗೆ ಡ್ರಿಪ್ ಅಳವಡಿಸಿಕೊಂಡು 3 ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದರು. ಉತ್ತಮ ಇಳುವರಿ ಬಂದಿತ್ತು. ಕಳೆನಾಶಕ ಸಿಂಪಡಿಸಿದ ಕಾರಣ 2 ಎಕರೆ ಪ್ರದೇಶದ ಈರುಳ್ಳಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.</p>.<p>ಕೆ.ಜಿಗೆ ₹1.500ರಂತೆ 13 ಕೆ.ಜಿ ಬೀಜವನ್ನು ನಾಟಿ ಮಾಡಿದ್ದೆ. ಗೊಬ್ಬರ, ಬೇಸಾಯ, ಕೂಲಿ ಸೇರಿ ₹ 30 ಸಾವಿರ ಖರ್ಜಾಗಿತ್ತು. ಫಸಲು ಚೆನ್ನಾಗಿ ಬಂದಿತ್ತು. ಕಿಡಿಗೇಡಿಗಳ ಕೃತ್ಯದಿಂದ ಕೈ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ನಿಂಗೇಗೌಡ ಅಳಲು ತೋಡಿಕೊಂಡರು.</p>.<p>ಕಳೆನಾಶಕ ಸಿಂಪಡಣೆ ಸಂಬಂಧ ಪಕ್ಕ ಹೊಲದ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದೆ. ಆದರೆ ಏನೂ ಪ್ರಯೋಜನವಾಗಲಿಲ್ಲ ಎಂದು ಅವರು ದೂರಿದರು.</p>.<p>ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು ರೈತನಿಗೆ ಪರಿಹಾರ ಕೊಡಿಸಬೇಕು ಎಂದು ರೈತ ಮುಖಂಡ ಕೆ.ಪಿ. ಭೂತಯ್ಯ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ:</strong>ತಾಲ್ಲೂಕಿನ ಮೀರಾಸಾಬಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಡಪನಕುಂಟೆ ಗ್ರಾಮದಲ್ಲಿ ಈರುಳ್ಳಿ ಬೆಳೆಗೆ ಕಿಡಿಗೇಡಿಗಳು ಕಳೆನಾಶಕ ಸಿಂಪಡಿಸಿ ಬೆಳೆ ನಾಶಪಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>ರೈತ ನಿಂಗೇಗೌಡ ಕೊಳವೆಬಾವಿಯ ನೀರಿಗೆ ಡ್ರಿಪ್ ಅಳವಡಿಸಿಕೊಂಡು 3 ಎಕರೆಯಲ್ಲಿ ಈರುಳ್ಳಿ ಬೆಳೆದಿದ್ದರು. ಉತ್ತಮ ಇಳುವರಿ ಬಂದಿತ್ತು. ಕಳೆನಾಶಕ ಸಿಂಪಡಿಸಿದ ಕಾರಣ 2 ಎಕರೆ ಪ್ರದೇಶದ ಈರುಳ್ಳಿ ಬೆಳೆ ಸಂಪೂರ್ಣವಾಗಿ ನಾಶವಾಗಿದೆ.</p>.<p>ಕೆ.ಜಿಗೆ ₹1.500ರಂತೆ 13 ಕೆ.ಜಿ ಬೀಜವನ್ನು ನಾಟಿ ಮಾಡಿದ್ದೆ. ಗೊಬ್ಬರ, ಬೇಸಾಯ, ಕೂಲಿ ಸೇರಿ ₹ 30 ಸಾವಿರ ಖರ್ಜಾಗಿತ್ತು. ಫಸಲು ಚೆನ್ನಾಗಿ ಬಂದಿತ್ತು. ಕಿಡಿಗೇಡಿಗಳ ಕೃತ್ಯದಿಂದ ಕೈ ಬಂದ ತುತ್ತು ಬಾಯಿಗೆ ಬರದಂತಾಗಿದೆ ಎಂದು ನಿಂಗೇಗೌಡ ಅಳಲು ತೋಡಿಕೊಂಡರು.</p>.<p>ಕಳೆನಾಶಕ ಸಿಂಪಡಣೆ ಸಂಬಂಧ ಪಕ್ಕ ಹೊಲದ ಮಾಲೀಕರ ವಿರುದ್ಧ ದೂರು ದಾಖಲಿಸಿದ್ದೆ. ಆದರೆ ಏನೂ ಪ್ರಯೋಜನವಾಗಲಿಲ್ಲ ಎಂದು ಅವರು ದೂರಿದರು.</p>.<p>ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಂಡು ರೈತನಿಗೆ ಪರಿಹಾರ ಕೊಡಿಸಬೇಕು ಎಂದು ರೈತ ಮುಖಂಡ ಕೆ.ಪಿ. ಭೂತಯ್ಯ ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>