ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ‘ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಜನರ ನೋವಿಗೆ ಸ್ಪಂದಿಸಬೇಕಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನದ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿದ್ದು, ಹಿಟ್ಲರ್ ಆಡಳಿದ ಮಾದರಿ ಗೋಚರಿಸುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.