<p><strong>ಜವನಗೊಂಡನಹಳ್ಳಿ (ಹಿರಿಯೂರು):</strong> ಗ್ರಾಮದಲ್ಲಿ ಅನಧಿಕೃತವಾಗಿ ಖಾಸಗಿಯಾಗಿ ಕ್ಲಿನಿಕ್ ನಡೆಸುತ್ತಿದ್ದ ಸರ್ಕಾರಿ ಆಸ್ಪತ್ರೆಯೊಂದರ ಫಾರ್ಮಸಿಸ್ಟ್ ಒಬ್ಬರನ್ನು ಶುಕ್ರವಾರ ರಾತ್ರಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬಂಧಿಸಿದೆ. ಸರ್ಕಾರಿ ಆಸ್ಪತ್ರೆಗೆ ಸೇರಿದ ಸಾವಿರಾರು ರೂಪಾಯಿ ಮೌಲ್ಯದ ಸಿರಿಂಜ್, ಔಷಧಗಳನ್ನು ವಶಕ್ಕೆ ಪಡೆದಿದೆ.</p>.<p>ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಸಿಸ್ಟ್ ಆಗಿರುವ ವಿವೇಕಾನಂದ ಬಂಧಿತ ಆರೋಪಿ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಅವರಿಗೆ ವಿವೇಕಾನಂದ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿರುವ ಮಾಹಿತಿ ಬಂದ ಕಾರಣ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಗ್ರಾಮಾಂತರ ಠಾಣೆ ಎಸ್ಐ ಶಶಿಕಲಾ ಅವರೊಂದಿಗೆ ಶುಕ್ರವಾರ ರಾತ್ರಿ 11.30ಕ್ಕೆ ಕ್ಲಿನಿಕ್ ಮೇಲೆ ದಾಳಿ ನಡೆಸಲಾಯಿತು.</p>.<p>ಆರೋಪಿಯನ್ನು ಬಂಧಿಸಿರುವ ಗ್ರಾಮಾಂತರ ಠಾಣೆ ಪೊಲೀಸರು, ‘ದಾಳಿಯ ವೇಳೆ ಸರ್ಕಾರಿ ಆಸ್ಪತ್ರೆಯ ಔಷಧಗಳು, ಸಿರಿಂಜ್ಗಳು ಲಭ್ಯವಾಗಿವೆ. ಆರೋಪಿಯು ಅಧಿಕೃತ ವೈದ್ಯರಲ್ಲದಿದ್ದರೂ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿರುವುದು, ಸರ್ಕಾರಿ ಆಸ್ಪತ್ರೆಯ ಔಷಧಗಳನ್ನು ದುರುಪಯೋಗಪಡಿಸಿಕೊಂಡು ಜನರಿಗೆ ಮಾರುವ ಮೂಲಕ ಹಣ ಗಳಿಸಿ ಸರ್ಕಾರಕ್ಕೆ ವಂಚಿಸಿರುವುದು ಕಂಡು ಬಂದಿದೆ. ಆರೋಪಿಯಿಂದ ₹ 1,36,860 ನಗದು ವಶ ಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜವನಗೊಂಡನಹಳ್ಳಿ (ಹಿರಿಯೂರು):</strong> ಗ್ರಾಮದಲ್ಲಿ ಅನಧಿಕೃತವಾಗಿ ಖಾಸಗಿಯಾಗಿ ಕ್ಲಿನಿಕ್ ನಡೆಸುತ್ತಿದ್ದ ಸರ್ಕಾರಿ ಆಸ್ಪತ್ರೆಯೊಂದರ ಫಾರ್ಮಸಿಸ್ಟ್ ಒಬ್ಬರನ್ನು ಶುಕ್ರವಾರ ರಾತ್ರಿ ಅಧಿಕಾರಿಗಳ ತಂಡ ದಾಳಿ ನಡೆಸಿ ಬಂಧಿಸಿದೆ. ಸರ್ಕಾರಿ ಆಸ್ಪತ್ರೆಗೆ ಸೇರಿದ ಸಾವಿರಾರು ರೂಪಾಯಿ ಮೌಲ್ಯದ ಸಿರಿಂಜ್, ಔಷಧಗಳನ್ನು ವಶಕ್ಕೆ ಪಡೆದಿದೆ.</p>.<p>ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಾರ್ಮಸಿಸ್ಟ್ ಆಗಿರುವ ವಿವೇಕಾನಂದ ಬಂಧಿತ ಆರೋಪಿ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಅವರಿಗೆ ವಿವೇಕಾನಂದ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿರುವ ಮಾಹಿತಿ ಬಂದ ಕಾರಣ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ, ಸಿಪಿಐ ರಾಘವೇಂದ್ರ, ಗ್ರಾಮಾಂತರ ಠಾಣೆ ಎಸ್ಐ ಶಶಿಕಲಾ ಅವರೊಂದಿಗೆ ಶುಕ್ರವಾರ ರಾತ್ರಿ 11.30ಕ್ಕೆ ಕ್ಲಿನಿಕ್ ಮೇಲೆ ದಾಳಿ ನಡೆಸಲಾಯಿತು.</p>.<p>ಆರೋಪಿಯನ್ನು ಬಂಧಿಸಿರುವ ಗ್ರಾಮಾಂತರ ಠಾಣೆ ಪೊಲೀಸರು, ‘ದಾಳಿಯ ವೇಳೆ ಸರ್ಕಾರಿ ಆಸ್ಪತ್ರೆಯ ಔಷಧಗಳು, ಸಿರಿಂಜ್ಗಳು ಲಭ್ಯವಾಗಿವೆ. ಆರೋಪಿಯು ಅಧಿಕೃತ ವೈದ್ಯರಲ್ಲದಿದ್ದರೂ ಅನಧಿಕೃತವಾಗಿ ಕ್ಲಿನಿಕ್ ನಡೆಸುತ್ತಿರುವುದು, ಸರ್ಕಾರಿ ಆಸ್ಪತ್ರೆಯ ಔಷಧಗಳನ್ನು ದುರುಪಯೋಗಪಡಿಸಿಕೊಂಡು ಜನರಿಗೆ ಮಾರುವ ಮೂಲಕ ಹಣ ಗಳಿಸಿ ಸರ್ಕಾರಕ್ಕೆ ವಂಚಿಸಿರುವುದು ಕಂಡು ಬಂದಿದೆ. ಆರೋಪಿಯಿಂದ ₹ 1,36,860 ನಗದು ವಶ ಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>