<p><strong>ಚಿತ್ರದುರ್ಗ: ‘</strong>ವಿದೇಶಿ ಸಂಶೋಧಕರಿಂದ ಅತೀ ಹೆಚ್ಚು ಸಂಶೋಧನೆಗೆ ಒಳಪಟ್ಟ ದಾರ್ಶನಿಕ ವೇಮನರು. ಸಮಾಜದಲ್ಲಿನ ಲೋಪದೋಷ, ಅನ್ಯಾಯ, ಅನೀತಿಯನ್ನು ಯಾವುದೇ ಮುಲಾಜಿಲ್ಲದೇ ನೇರವಾಗಿ ಖಂಡಿಸಿದ್ದರು’ ಎಂದು ಸಾಹಿತಿ ಎಸ್.ಬಿ.ಭೀಮಾರೆಡ್ಡಿ ಹೇಳಿದರು. </p>.<p>ನಗರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿಯಲ್ಲಿ ಉಪನ್ಯಾಸ ನೀಡಿದರು. </p>.<p>‘ಸಾಮಾಜಿಕ ಸಮಾನತೆ, ನೈತಿಕ ಮೌಲ್ಯಗಳನ್ನು ಜನಸಾಮಾನ್ಯರ ಭಾಷೆಯಲ್ಲಿ ಸರಳವಾಗಿ ಅರ್ಥೈಸಿದ್ದರು. ಜತೆಗೆ ಜಾತಿ ಪದ್ಧತಿ, ಮೂಢನಂಬಿಕೆಗಳನ್ನು ತೀವ್ರವಾಗಿ ಖಂಡಿಸುತ್ತಾ ಬಂದರು’ ಎಂದು ತಿಳಿಸಿದರು. </p>.<p>‘ವಿದೇಶಿ ಸಂಶೋಧಕ ಸಿ.ಪಿ.ಬ್ರೌನ್ ಅವರು ವೇಮನರ ವಚನಗಳನ್ನು ಸಂಗ್ರಹ ಮಾಡಿದ ಮೇಲೆ, ಅದರಲ್ಲಿರುವ ವಿಷಯ, ತಿರುಳನ್ನು ಬೇರೆಯವರಿಂದ ಕೇಳಿ ತಿಳಿದು, ಆಶ್ಚರ್ಯಗೊಂಡಿದ್ದರು. ಬಳಿಕ ತೆಲುಗು ಭಾಷೆ ಕಲಿತು ಸುಮಾರು 1,167 ವಚನಗಳನ್ನು ಸಂಗ್ರಹ ಮಾಡಿದ್ದಾರೆ’ ಎಂದು ಹೇಳಿದರು. </p>.<p>‘ವೇಮನರು ತಮ್ಮ ಎಲ್ಲ ವಚನಗಳಲ್ಲಿ ಆತ್ಮಚಿಂತನೆ ಕುರಿತು ಹೆಚ್ಚು ತಿಳಿಸಿದ್ದಾರೆ. ನೈತಿಕತೆ ಬಳಸಿಕೊಂಡು ನಾವು ಮುಕ್ತಿ ಮಾರ್ಗದ ಕಡೆ ಸಾಗಬೇಕು. ಅಲ್ಲಿ ಆತ್ಮ ಚಿಂತನೆ, ನೈತಿಕತೆ, ಮುಕ್ತಿ ಮಾರ್ಗಕ್ಕೆ ಸಂಬಂಧಪಟ್ಟ ಬೇರೆ ಬೇರೆ ರೀತಿಯಾದ ವಚನಗಳನ್ನು ರಚಿಸಿರುವುದನ್ನು ನಾವು ಕಾಣಬಹುದಾಗಿದೆ’ ಎಂದರು. </p>.<p>‘ವೇಮನ ಚರಿತ್ರೆ ನಮಗೆ ನೆಪಮಾತ್ರ. ಅವರ ಸಾಹಿತ್ಯ ಬೋಧನೆಗಳು ನಮ್ಮ ದಾರಿಗೆ ಬೆಳಕು ಚೆಲ್ಲಲಿವೆ. ವೇಮನರ ಸಾಹಿತ್ಯ ಮುಂದಿಟ್ಟುಕೊಂಡು ನಾವು ನಮ್ಮ ಜೀವನ ರೂಪಿಸಿಕೊಳ್ಳಬೇಕು’ ಎಂದು ಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ತಿಳಿಸಿದರು. </p>.<p>‘ನಾವೆಲ್ಲರೂ ಸಂತೃಪ್ತಿಯಿಂದ ಬದುಕಬೇಕು ಎಂಬುದೇ ಮಹನೀಯರ ಜಯಂತಿಗಳ ಆಶಯ. ವೇಮನರು ತಮ್ಮ ಬೋಧನೆಗಳನ್ನು ಜನರಾಡುವ ಭಾಷೆಯಲ್ಲಿ ಸರಳವಾಗಿ ಬರೆದಿರುವುದು ಅವರ ವಿಶೇಷ. ಜನರಿಗೆ ಗೊತ್ತಿರುವ ಉಪಮೆ, ಪ್ರತಿಮೆಗಳ ಮೂಲಕ ತಿಳಿಸಿದ್ದಾರೆ. ಇದು ಹೆಚ್ಚಿನ ಜನರಿಗೆ ತಲುಪಲು ಸಾಧ್ಯವಾಯಿತು’ ಎಂದು ಅಭಿಪ್ರಾಯಪಟ್ಟರು. </p>.<p>ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಜಿಲ್ಲಾ ಪಂಚಾಯಿತಿ ಲೆಕ್ಕಪತ್ರ ಶಾಖೆಯ ಸಹಾಯಕ ನಿರ್ದೇಶಕ ದಾದಾಪೀರ್, ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ: ‘</strong>ವಿದೇಶಿ ಸಂಶೋಧಕರಿಂದ ಅತೀ ಹೆಚ್ಚು ಸಂಶೋಧನೆಗೆ ಒಳಪಟ್ಟ ದಾರ್ಶನಿಕ ವೇಮನರು. ಸಮಾಜದಲ್ಲಿನ ಲೋಪದೋಷ, ಅನ್ಯಾಯ, ಅನೀತಿಯನ್ನು ಯಾವುದೇ ಮುಲಾಜಿಲ್ಲದೇ ನೇರವಾಗಿ ಖಂಡಿಸಿದ್ದರು’ ಎಂದು ಸಾಹಿತಿ ಎಸ್.ಬಿ.ಭೀಮಾರೆಡ್ಡಿ ಹೇಳಿದರು. </p>.<p>ನಗರದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿಯಲ್ಲಿ ಉಪನ್ಯಾಸ ನೀಡಿದರು. </p>.<p>‘ಸಾಮಾಜಿಕ ಸಮಾನತೆ, ನೈತಿಕ ಮೌಲ್ಯಗಳನ್ನು ಜನಸಾಮಾನ್ಯರ ಭಾಷೆಯಲ್ಲಿ ಸರಳವಾಗಿ ಅರ್ಥೈಸಿದ್ದರು. ಜತೆಗೆ ಜಾತಿ ಪದ್ಧತಿ, ಮೂಢನಂಬಿಕೆಗಳನ್ನು ತೀವ್ರವಾಗಿ ಖಂಡಿಸುತ್ತಾ ಬಂದರು’ ಎಂದು ತಿಳಿಸಿದರು. </p>.<p>‘ವಿದೇಶಿ ಸಂಶೋಧಕ ಸಿ.ಪಿ.ಬ್ರೌನ್ ಅವರು ವೇಮನರ ವಚನಗಳನ್ನು ಸಂಗ್ರಹ ಮಾಡಿದ ಮೇಲೆ, ಅದರಲ್ಲಿರುವ ವಿಷಯ, ತಿರುಳನ್ನು ಬೇರೆಯವರಿಂದ ಕೇಳಿ ತಿಳಿದು, ಆಶ್ಚರ್ಯಗೊಂಡಿದ್ದರು. ಬಳಿಕ ತೆಲುಗು ಭಾಷೆ ಕಲಿತು ಸುಮಾರು 1,167 ವಚನಗಳನ್ನು ಸಂಗ್ರಹ ಮಾಡಿದ್ದಾರೆ’ ಎಂದು ಹೇಳಿದರು. </p>.<p>‘ವೇಮನರು ತಮ್ಮ ಎಲ್ಲ ವಚನಗಳಲ್ಲಿ ಆತ್ಮಚಿಂತನೆ ಕುರಿತು ಹೆಚ್ಚು ತಿಳಿಸಿದ್ದಾರೆ. ನೈತಿಕತೆ ಬಳಸಿಕೊಂಡು ನಾವು ಮುಕ್ತಿ ಮಾರ್ಗದ ಕಡೆ ಸಾಗಬೇಕು. ಅಲ್ಲಿ ಆತ್ಮ ಚಿಂತನೆ, ನೈತಿಕತೆ, ಮುಕ್ತಿ ಮಾರ್ಗಕ್ಕೆ ಸಂಬಂಧಪಟ್ಟ ಬೇರೆ ಬೇರೆ ರೀತಿಯಾದ ವಚನಗಳನ್ನು ರಚಿಸಿರುವುದನ್ನು ನಾವು ಕಾಣಬಹುದಾಗಿದೆ’ ಎಂದರು. </p>.<p>‘ವೇಮನ ಚರಿತ್ರೆ ನಮಗೆ ನೆಪಮಾತ್ರ. ಅವರ ಸಾಹಿತ್ಯ ಬೋಧನೆಗಳು ನಮ್ಮ ದಾರಿಗೆ ಬೆಳಕು ಚೆಲ್ಲಲಿವೆ. ವೇಮನರ ಸಾಹಿತ್ಯ ಮುಂದಿಟ್ಟುಕೊಂಡು ನಾವು ನಮ್ಮ ಜೀವನ ರೂಪಿಸಿಕೊಳ್ಳಬೇಕು’ ಎಂದು ಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ತಿಳಿಸಿದರು. </p>.<p>‘ನಾವೆಲ್ಲರೂ ಸಂತೃಪ್ತಿಯಿಂದ ಬದುಕಬೇಕು ಎಂಬುದೇ ಮಹನೀಯರ ಜಯಂತಿಗಳ ಆಶಯ. ವೇಮನರು ತಮ್ಮ ಬೋಧನೆಗಳನ್ನು ಜನರಾಡುವ ಭಾಷೆಯಲ್ಲಿ ಸರಳವಾಗಿ ಬರೆದಿರುವುದು ಅವರ ವಿಶೇಷ. ಜನರಿಗೆ ಗೊತ್ತಿರುವ ಉಪಮೆ, ಪ್ರತಿಮೆಗಳ ಮೂಲಕ ತಿಳಿಸಿದ್ದಾರೆ. ಇದು ಹೆಚ್ಚಿನ ಜನರಿಗೆ ತಲುಪಲು ಸಾಧ್ಯವಾಯಿತು’ ಎಂದು ಅಭಿಪ್ರಾಯಪಟ್ಟರು. </p>.<p>ತಹಶೀಲ್ದಾರ್ ಬಿ.ಎಂ.ಗೋವಿಂದರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ.ಗುರುನಾಥ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ಜಿಲ್ಲಾ ಪಂಚಾಯಿತಿ ಲೆಕ್ಕಪತ್ರ ಶಾಖೆಯ ಸಹಾಯಕ ನಿರ್ದೇಶಕ ದಾದಾಪೀರ್, ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>