‘ಹೊಲವನ್ನು ಹಸನು ಮಾಡಲು, ಬಿತ್ತನೆ ಬೀಜ, ಗೊಬ್ಬರ, ಬಿತ್ತನೆ ಕೂಲಿಗಾಗಿ ಎಕರೆಗೆ ₹ 10 ಸಾವಿರದಿಂದ ₹12 ಸಾವಿರ ಖರ್ಚು ಮಾಡಿದ್ದೇವೆ. ಬಿತ್ತನೆ ಮಾಡಿದ ದಿನದಿಂದ ಅಕ್ಕ ಪಕ್ಕದ ರೈತರೊಂದಿಗೆ ಹೊಲಕ್ಕೆ ಹೋಗಿ, ಹಗಲು ರಾತ್ರಿಯಲ್ಲಿ ಪಾಳಿಯಾಗಿ ಹಂದಿಗಳನ್ನು ಕಾಯುತ್ತೇವೆ. ಆದರೂ, ಯಾವುದೋ ಸಮಯದಲ್ಲಿ ಹಂದಿಗಳು ಬಂದು ಹೊಲವನ್ನು ಕೆದಕಿ, ಒಂದು ಕಾಳನ್ನೂ ಬಿಡದೆ ತಿಂದು ಹಾಕುತ್ತಿವೆ. ಮತ್ತೆ ಸಾಲ ಮಾಡಿ ಬಿತ್ತನೆ ಮಾಡುವುದು ಅನಿವಾರ್ಯವಾಗಿದೆ. ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ರೈತರಿಗೆ ನೆರವು ನೀಡಿ, ಹಂದಿಗಳ ಹಾವಳಿಯನ್ನು ತಪ್ಪಿಸಬೇಕು’ ಎಂದು ಗ್ರಾಮದ ರೈತರಾದ ಪ್ರಭುದೇವ, ರಂಗಸ್ವಾಮಿ, ಜಯಪ್ಪ, ಚಿಕ್ಕಜಾಜೂರಿನ ಕಲ್ಲೇಶಪ್ಪ, ಬಸವರಾಜ್, ನಾಗರಾಜ್ ಮನವಿ ಮಾಡಿದ್ದಾರೆ.