ಗಲಭೆಯಲ್ಲಿ ಗಾಯಗೊಂಡವರನ್ನು ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಗೆ ಬಂದ ಮೇಲೂ ಆಸ್ಪತ್ರೆ ಆವರಣದಲ್ಲಿ ಎರಡು ಗುಂಪಿನವರು ಮತ್ತೆ ಕೈಕೈ ಮಿಲಾಯಿಸಿದ್ದಾರೆ. ಈ ಸಂಬಂಧ ಆಸ್ಪತ್ರೆಯ ಡಾ.ಅಶ್ವಿನಿ ಅವರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಎರಡೂ ಗುಂಪಿನವರು ದೂರು-ಪ್ರತಿದೂರು ಕೊಟ್ಟಿದ್ದು, ಗಲಭೆಗೆ ಸಂಬಂಧಿಸಿದ ಮೂರು ಪ್ರಕರಣಗಳು ದಾಖಲಾಗಿವೆ.