<p><strong>ಹಿರಿಯೂರು:</strong> ನಗರದಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆಯಡಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ನೋಂದಣಿ ಕಾರ್ಯಾಗಾರಕ್ಕೆ ನಗರಸಭೆ ಸಭಾಂಗಣದಲ್ಲಿ ಬುಧವಾರ ಪೌರಾಯುಕ್ತ ಎ. ವಾಸೀಂ ಚಾಲನೆ ನೀಡಿದರು.</p>.<p>ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿರುವ 811 ಜನರಿಗೆ ನಗರಸಭೆಯಿಂದ ವಿವಿಧ ಯೋಜನೆಗಳಡಿ ಸಾಲಸೌಲಭ್ಯ ಕಲ್ಪಿಸಲಾಗಿದೆ. ಪ್ರಸ್ತುತ 18 ರಿಂದ 40 ವರ್ಷ ವಯಸ್ಸಿನವರಿಗೆ 60 ವರ್ಷದ ನಂತರ ಪಿಂಚಣಿ ಬರುವಂತೆ ಮಾಡಲು ಕಾರ್ಡ್ ನೀಡಲಾಗುತ್ತಿದೆ. ಈ ವಯೋಮಾನದವರು ಪ್ರತಿ ತಿಂಗಳು ₹ 55 ರಿಂದ ₹ 200 ಮೊತ್ತ ಪಾವತಿಸಿರೆ 60 ವರ್ಷದ ನಂತರ ಮಾಸಿಕ ₹ 3 ಸಾವಿರ ಪಿಂಚಣಿ ಪಡೆಯಬಹುದು. ಫಲಾನುಭವಿ ಮೃತಪಟ್ಟರೆ ನಾಮಿನಿಗೆ ಪಿಂಚಣಿ ದೊರೆಯುತ್ತದೆ ಎಂದು ತಿಳಿಸಿದರು.</p>.<p>ಪ್ರತಿವಾರ 20 ಜನರನ್ನು ಕರೆಸಿ ಅವರಿಗೆ ಯೋಜನೆಯ ಬಗ್ಗೆ ವಿವರಿಸಿ ಕಂತು ಪಾವತಿಸುವಂತೆ ತಿಳಿಸುತ್ತೇವೆ ಎಂದು ಕಮ್ಯುನಿಟಿ ಅಧಿಕಾರಿ ನಾಗರತ್ನಮ್ಮ ಹೇಳಿದರು.</p>.<p>ಬೀದಿಬದಿ ವ್ಯಾಪಾರಿಗಳು ಅಸಂಘಟಿತ ವಲಯಕ್ಕೆ ಬರುತ್ತಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೊಳಿಸುವ ಯೋಜನೆಗಳ ಮಾಹಿತಿ ಪಡೆದು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕಾರ್ಮಿಕ ಅಧಿಕಾರಿ ರಾಜಣ್ಣ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ನಗರದಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದ ಆತ್ಮ ನಿರ್ಭರ ಯೋಜನೆಯಡಿ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ನೋಂದಣಿ ಕಾರ್ಯಾಗಾರಕ್ಕೆ ನಗರಸಭೆ ಸಭಾಂಗಣದಲ್ಲಿ ಬುಧವಾರ ಪೌರಾಯುಕ್ತ ಎ. ವಾಸೀಂ ಚಾಲನೆ ನೀಡಿದರು.</p>.<p>ಬೀದಿ ಬದಿಯಲ್ಲಿ ವ್ಯಾಪಾರ ನಡೆಸುತ್ತಿರುವ 811 ಜನರಿಗೆ ನಗರಸಭೆಯಿಂದ ವಿವಿಧ ಯೋಜನೆಗಳಡಿ ಸಾಲಸೌಲಭ್ಯ ಕಲ್ಪಿಸಲಾಗಿದೆ. ಪ್ರಸ್ತುತ 18 ರಿಂದ 40 ವರ್ಷ ವಯಸ್ಸಿನವರಿಗೆ 60 ವರ್ಷದ ನಂತರ ಪಿಂಚಣಿ ಬರುವಂತೆ ಮಾಡಲು ಕಾರ್ಡ್ ನೀಡಲಾಗುತ್ತಿದೆ. ಈ ವಯೋಮಾನದವರು ಪ್ರತಿ ತಿಂಗಳು ₹ 55 ರಿಂದ ₹ 200 ಮೊತ್ತ ಪಾವತಿಸಿರೆ 60 ವರ್ಷದ ನಂತರ ಮಾಸಿಕ ₹ 3 ಸಾವಿರ ಪಿಂಚಣಿ ಪಡೆಯಬಹುದು. ಫಲಾನುಭವಿ ಮೃತಪಟ್ಟರೆ ನಾಮಿನಿಗೆ ಪಿಂಚಣಿ ದೊರೆಯುತ್ತದೆ ಎಂದು ತಿಳಿಸಿದರು.</p>.<p>ಪ್ರತಿವಾರ 20 ಜನರನ್ನು ಕರೆಸಿ ಅವರಿಗೆ ಯೋಜನೆಯ ಬಗ್ಗೆ ವಿವರಿಸಿ ಕಂತು ಪಾವತಿಸುವಂತೆ ತಿಳಿಸುತ್ತೇವೆ ಎಂದು ಕಮ್ಯುನಿಟಿ ಅಧಿಕಾರಿ ನಾಗರತ್ನಮ್ಮ ಹೇಳಿದರು.</p>.<p>ಬೀದಿಬದಿ ವ್ಯಾಪಾರಿಗಳು ಅಸಂಘಟಿತ ವಲಯಕ್ಕೆ ಬರುತ್ತಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೊಳಿಸುವ ಯೋಜನೆಗಳ ಮಾಹಿತಿ ಪಡೆದು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕಾರ್ಮಿಕ ಅಧಿಕಾರಿ ರಾಜಣ್ಣ ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>