ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ 2ನೇ ಪ್ರಕರಣಕ್ಕೆ ಸಂಬಂಧಿ ಸಿದಂತೆ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಶನಿವಾರ ಮುರುಘಾ ಮಠಕ್ಕೆ ಕರೆ ತಂದು ಸ್ಥಳ ಮಹಜರು ನಡೆಸಿದರು.
ಬೆಳಿಗ್ಗೆ ಡಿವೈಎಸ್ಪಿ ಕಚೇರಿಯಿಂದ ಪೊಲೀಸ್ ವಾಹನದಲ್ಲಿ ಅವರನ್ನು ಮಠಕ್ಕೆ ಕರೆತರಲಾಯಿತು.
ಸತತ ಎರಡು ಗಂಟೆಗಳ ಕಾಲ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವ ದಲ್ಲಿ ಕೃತ್ಯ ನಡೆದ ಸ್ಥಳದ ಮಹಜರು ನಡೆಸಲಾಯಿತು. ಈ ವೇಳೆ 2 ಬ್ಯಾಗ್ ಗಳಲ್ಲಿ ಸಾಕ್ಷ್ಯಕ್ಕೆ ಸಂಬಂಧಿತ ವಸ್ತುಗಳು, ಶರಣರ ಬಟ್ಟೆ ಮತ್ತಿತರೆ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದರು.
ಬಳಿಕ ಜಿಲ್ಲಾ ಆಸ್ಪತ್ರೆಗೆ ಕರೆ ತಂದು ಆರೋಗ್ಯ ತಪಾಸಣೆ ನಡೆಸಿ ಪುನಃ ಡಿವೈಎಸ್ಪಿ ಕಚೇರಿಗೆ ಕರೆದುಕೊಂಡು ಹೋದರು. ಮೂರು ದಿನಗಳ ಪೊಲೀಸ್ ವಿಚಾರಣೆ ಶನಿವಾರ ಮುಗಿದ ಕಾರಣಕ್ಕೆ ಮಧ್ಯಾಹ್ನ 4 ಗಂಟೆಗೆ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸ ಲಾಯಿತು. ನ.8ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಅವರನ್ನು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಯಿತು.